<p><strong>ಮೈಸೂರು: </strong>ಗುತ್ತಿಗೆ ಏಜೆನ್ಸಿಗಳು ಗುತ್ತಿಗೆ ನೌಕರರ ಮೇಲೆ ದೌರ್ಜನ್ಯ ಎಸಗುತ್ತಿವೆ. ಗುತ್ತಿಗೆ ನೌಕರರ ಹಿತರಕ್ಷಣೆಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಹೊರಗುತ್ತಿಗೆ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಮುಂದೆ ಸೇರಿ ಘೋಷಣೆಗಳನ್ನು ಕೂಗಿದರು.</p>.<p>ನ್ಯಾಯವಾಗಿ ದಕ್ಕಬೇಕಾದ ಸೌಲಭ್ಯ ಕೇಳಿದರೆ ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಾರೆ. ಕಾಲಕ್ಕೆ ಸರಿಯಾಗಿ ವೇತನ ನೀಡುವುದಿಲ್ಲ. ಕಳೆದ ಮೂರು ತಿಂಗಳುಗಳಿಂದ ವೇತನ ನೀಡಿಲ್ಲ. ಹೀಗಾದರೆ, ಜೀವನ ನಿರ್ವಹಣೆ ಹೇಗೆ ಮಾಡುವುದು ಎಂದು ಅವರು ಪ್ರಶ್ನಿಸಿದರು.</p>.<p>ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಾಜ್ಯ ಸರ್ಕಾರಿ ಆಸ್ಪತ್ರೆಗಳ ನಾನ್ ಕ್ಲಿನಿಕಲ್ ಹಾಗೂ ಡಿ.ದರ್ಜೆ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ರಾಜ್ಯ ಕಾರ್ಮಿಕ ಇಲಾಖೆಯು ನೌಕರರಿಗೆ ಪರಿಷ್ಕೃತ ವೇತನ ನೀಡಬೇಕು ಎಂದು ಎರಡು ವರ್ಷಗಳ ಹಿಂದೆಯೇ ಆದೇಶ ಹೊರಡಿಸಿತ್ತು. ಆದರೆ, ಇಲ್ಲಿಯವರೆಗೂ ಗುತ್ತಿಗೆದಾರರು ಈ ಆದೇಶವನ್ನು ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಗುತ್ತಿಗೆ ಏಜೆನ್ಸಿಗಳು ಗುತ್ತಿಗೆ ನೌಕರರ ಮೇಲೆ ದೌರ್ಜನ್ಯ ಎಸಗುತ್ತಿವೆ. ಗುತ್ತಿಗೆ ನೌಕರರ ಹಿತರಕ್ಷಣೆಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಹೊರಗುತ್ತಿಗೆ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಮುಂದೆ ಸೇರಿ ಘೋಷಣೆಗಳನ್ನು ಕೂಗಿದರು.</p>.<p>ನ್ಯಾಯವಾಗಿ ದಕ್ಕಬೇಕಾದ ಸೌಲಭ್ಯ ಕೇಳಿದರೆ ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಾರೆ. ಕಾಲಕ್ಕೆ ಸರಿಯಾಗಿ ವೇತನ ನೀಡುವುದಿಲ್ಲ. ಕಳೆದ ಮೂರು ತಿಂಗಳುಗಳಿಂದ ವೇತನ ನೀಡಿಲ್ಲ. ಹೀಗಾದರೆ, ಜೀವನ ನಿರ್ವಹಣೆ ಹೇಗೆ ಮಾಡುವುದು ಎಂದು ಅವರು ಪ್ರಶ್ನಿಸಿದರು.</p>.<p>ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಾಜ್ಯ ಸರ್ಕಾರಿ ಆಸ್ಪತ್ರೆಗಳ ನಾನ್ ಕ್ಲಿನಿಕಲ್ ಹಾಗೂ ಡಿ.ದರ್ಜೆ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ರಾಜ್ಯ ಕಾರ್ಮಿಕ ಇಲಾಖೆಯು ನೌಕರರಿಗೆ ಪರಿಷ್ಕೃತ ವೇತನ ನೀಡಬೇಕು ಎಂದು ಎರಡು ವರ್ಷಗಳ ಹಿಂದೆಯೇ ಆದೇಶ ಹೊರಡಿಸಿತ್ತು. ಆದರೆ, ಇಲ್ಲಿಯವರೆಗೂ ಗುತ್ತಿಗೆದಾರರು ಈ ಆದೇಶವನ್ನು ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>