<p><strong>ಸಾಲಿಗ್ರಾಮ: </strong>ಪಟ್ಟಣದ ಮಹಾವೀರ ರಸ್ತೆಯಲ್ಲಿ ನಡೆದ ಬೈಕ್ ಸವಾರರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ್ದು, ಗುರುವಾರ ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸ್ ಠಾಣೆ ಎದುರು ಒಂದು ಗುಂಪು ಪ್ರತಿಭಟನೆ ನಡೆಸಿದೆ.</p>.<p>ಟ್ಯಾಂಕ್ ವೃತ್ತದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಮಹಾವೀರ ರಸ್ತೆಯಲ್ಲಿವರ್ತಕರು ಅಂಗಡಿ ಮುಚ್ಚಿದರು. ಜಿಲ್ಲಾ ಸಶಸ್ತ್ರ ಪಡೆಯ ಎರಡು ತುಕಡಿಗಳನ್ನು ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಂದ ಪೊಲೀಸರನ್ನು ಪಟ್ಟಣಕ್ಕೆ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ.</p>.<p>ಸಿಪಿಐ ಪಿ.ಕೆ.ರಾಜು, ಕೆ.ಆರ್.ನಗರ ಸಬ್ಇನ್ಸ್ಪೆಕ್ಟರ್ಗಳಾದ ಚೇತನ್ ಮತ್ತು ಮಾದಪ್ಪ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.</p>.<p><strong>ಘಟನೆ ವಿವರ:</strong>ಸಾಲಿಗ್ರಾಮದ ವಾಸಿ ಶ್ರೀನಿವಾಸ ತನ್ನ ಅತ್ತೆ ರಾಜಮ್ಮನನ್ನು ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಮಹಾವೀರ ರಸ್ತೆಯಲ್ಲಿ ಬುಧವಾರ ರಾತ್ರಿ ಹೋಗುವಾಗ, ಎದುರಿನಿಂದ ಬಂದ ಬೈಕ್ ಸವಾರ ಚಂದು ಎಂಬಾತ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ಚಂದು ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.</p>.<p>ಚಂದು ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸಲಿಲ್ಲ ಎಂದು ಆರೋಪಿಸಿ ಶ್ರೀನಿವಾಸ ಬೆಂಬಲಿಗರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಸಿಪಿಐ ರಾಜು ಭೇಟಿ ನೀಡಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.</p>.<p>ಮತ್ತೊಂದು ಪ್ರಕರಣದಲ್ಲಿ ಅಜಯ್ ಎಂಬುವವರಿಗೆ ಚೇತನ್, ಗೌತಮ್ ಮತ್ತು ಜಲೇಂದ್ರ ಎಂಬುವವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದೂ ಆರೋಪಿಸಲಾಗಿದೆ. ಪಟ್ಟಣದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ: </strong>ಪಟ್ಟಣದ ಮಹಾವೀರ ರಸ್ತೆಯಲ್ಲಿ ನಡೆದ ಬೈಕ್ ಸವಾರರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ್ದು, ಗುರುವಾರ ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸ್ ಠಾಣೆ ಎದುರು ಒಂದು ಗುಂಪು ಪ್ರತಿಭಟನೆ ನಡೆಸಿದೆ.</p>.<p>ಟ್ಯಾಂಕ್ ವೃತ್ತದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಮಹಾವೀರ ರಸ್ತೆಯಲ್ಲಿವರ್ತಕರು ಅಂಗಡಿ ಮುಚ್ಚಿದರು. ಜಿಲ್ಲಾ ಸಶಸ್ತ್ರ ಪಡೆಯ ಎರಡು ತುಕಡಿಗಳನ್ನು ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಂದ ಪೊಲೀಸರನ್ನು ಪಟ್ಟಣಕ್ಕೆ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ.</p>.<p>ಸಿಪಿಐ ಪಿ.ಕೆ.ರಾಜು, ಕೆ.ಆರ್.ನಗರ ಸಬ್ಇನ್ಸ್ಪೆಕ್ಟರ್ಗಳಾದ ಚೇತನ್ ಮತ್ತು ಮಾದಪ್ಪ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.</p>.<p><strong>ಘಟನೆ ವಿವರ:</strong>ಸಾಲಿಗ್ರಾಮದ ವಾಸಿ ಶ್ರೀನಿವಾಸ ತನ್ನ ಅತ್ತೆ ರಾಜಮ್ಮನನ್ನು ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಮಹಾವೀರ ರಸ್ತೆಯಲ್ಲಿ ಬುಧವಾರ ರಾತ್ರಿ ಹೋಗುವಾಗ, ಎದುರಿನಿಂದ ಬಂದ ಬೈಕ್ ಸವಾರ ಚಂದು ಎಂಬಾತ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ಚಂದು ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.</p>.<p>ಚಂದು ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸಲಿಲ್ಲ ಎಂದು ಆರೋಪಿಸಿ ಶ್ರೀನಿವಾಸ ಬೆಂಬಲಿಗರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಸಿಪಿಐ ರಾಜು ಭೇಟಿ ನೀಡಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.</p>.<p>ಮತ್ತೊಂದು ಪ್ರಕರಣದಲ್ಲಿ ಅಜಯ್ ಎಂಬುವವರಿಗೆ ಚೇತನ್, ಗೌತಮ್ ಮತ್ತು ಜಲೇಂದ್ರ ಎಂಬುವವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದೂ ಆರೋಪಿಸಲಾಗಿದೆ. ಪಟ್ಟಣದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>