<p><strong>ಮೈಸೂರು:</strong> ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಭವನದ ಮುಂಭಾಗ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸರಳವಾಗಿ ಆಚರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.</p>.<p>ಗಾಂಧಿ ಜಯಂತಿ ದಿನದಂದೇ ‘ಕಿಸಾನ್–ಮಜ್ದೂರ್ ಬಚಾವೊ ದಿವಸ್’ ಆಚರಿಸಿ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.</p>.<p>ಮುಖಂಡ ಎಚ್.ಸಿ.ಮಹದೇವಪ್ಪ ಮಾತನಾಡಿ, ಒಬ್ಬ ಹೆಣ್ಣುಮಗಳು ಮಧ್ಯರಾತ್ರಿಯಲ್ಲಿ ಒಬ್ಬಳೇ ಹೋದರೂ ಅವಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಗಾಂಧೀಜಿ ಬಯಸಿದ್ದರು. ಆದರೆ ಇಂದು ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಓಡಾಡಲು ಭಯಪಡುವ ವಾತಾವರಣ ಸೃಷ್ಠಿಯಾಗಿದೆ. ಈ ಮೂಲಕ ಗಾಂಧಿ ಆದರ್ಶಗಳನ್ನು ಬಿಜೆಪಿ ಸರ್ಕಾರ ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅತ್ಯಾಚಾರ, ಭ್ರಷ್ಟಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ರೈತರು ಮತ್ತು ಕಾರ್ಮಿಕ ವಿರೋಧಿ ನೀತಿಗಳು ಜಾರಿಯಾಗಿವೆ. ಗಾಂಧೀಜಿ ಅವರ ತತ್ವಗಳು ಕಣ್ಮರೆಯಾಗುತ್ತಿವೆ ಎಂದು ದೂರಿದರು.</p>.<p>ಸರ್ಕಾರದ ವಿರುದ್ಧ ಪ್ರತಿಭಟಿಸುವವರ ಧ್ವನಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರ ಭೇಟಿಗೆ ಮುಂದಾದ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದು ತಳ್ಳಿದ್ದಾರೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆಯೋ ಅಥವಾ ಗೂಂಡಾ ರಾಜ್ಯದಲ್ಲಿದ್ದೇವೆಯೇ ಎಂದು ಪ್ರಶ್ನಿಸಿದರು.</p>.<p>ರಾಜ್ಯದಲ್ಲಿರುವ ಯಡಿಯೂರಪ್ಪ ಸರ್ಕಾರ ಕೂಡಾ ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಜಾರಿಗೆ ಸುಗ್ರೀವಾಜ್ಞೆ ತಂದಿದ್ದಾರೆ. ಶ್ರೀಮಂತರ ಉದ್ದಾರವೇ ಸರ್ಕಾರದ ಗುರಿ ಎಂದರು.</p>.<p><strong>ಪುಷ್ಪಾರ್ಚನೆ: </strong>ಗಾಂಧೀಜಿ ಮತ್ತು ಶಾಸ್ತ್ರಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ವೇಳೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಪಕ್ಷದ ಹಕ್ಕೊತ್ತಾಯ ಸಲ್ಲಿಸಲಾಯಿತು.</p>.<p>ಶಾಸಕರಾದ ತನ್ವೀರ್ ಸೇಠ್, ಅನಿಲ್ ಕುಮಾರ್, ಮುಖಂಡರಾದ ಆರ್.ಧ್ರುವನಾರಾಯಣ, ವಾಸು, ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಭವನದ ಮುಂಭಾಗ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸರಳವಾಗಿ ಆಚರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.</p>.<p>ಗಾಂಧಿ ಜಯಂತಿ ದಿನದಂದೇ ‘ಕಿಸಾನ್–ಮಜ್ದೂರ್ ಬಚಾವೊ ದಿವಸ್’ ಆಚರಿಸಿ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.</p>.<p>ಮುಖಂಡ ಎಚ್.ಸಿ.ಮಹದೇವಪ್ಪ ಮಾತನಾಡಿ, ಒಬ್ಬ ಹೆಣ್ಣುಮಗಳು ಮಧ್ಯರಾತ್ರಿಯಲ್ಲಿ ಒಬ್ಬಳೇ ಹೋದರೂ ಅವಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಗಾಂಧೀಜಿ ಬಯಸಿದ್ದರು. ಆದರೆ ಇಂದು ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಓಡಾಡಲು ಭಯಪಡುವ ವಾತಾವರಣ ಸೃಷ್ಠಿಯಾಗಿದೆ. ಈ ಮೂಲಕ ಗಾಂಧಿ ಆದರ್ಶಗಳನ್ನು ಬಿಜೆಪಿ ಸರ್ಕಾರ ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅತ್ಯಾಚಾರ, ಭ್ರಷ್ಟಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ರೈತರು ಮತ್ತು ಕಾರ್ಮಿಕ ವಿರೋಧಿ ನೀತಿಗಳು ಜಾರಿಯಾಗಿವೆ. ಗಾಂಧೀಜಿ ಅವರ ತತ್ವಗಳು ಕಣ್ಮರೆಯಾಗುತ್ತಿವೆ ಎಂದು ದೂರಿದರು.</p>.<p>ಸರ್ಕಾರದ ವಿರುದ್ಧ ಪ್ರತಿಭಟಿಸುವವರ ಧ್ವನಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರ ಭೇಟಿಗೆ ಮುಂದಾದ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದು ತಳ್ಳಿದ್ದಾರೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆಯೋ ಅಥವಾ ಗೂಂಡಾ ರಾಜ್ಯದಲ್ಲಿದ್ದೇವೆಯೇ ಎಂದು ಪ್ರಶ್ನಿಸಿದರು.</p>.<p>ರಾಜ್ಯದಲ್ಲಿರುವ ಯಡಿಯೂರಪ್ಪ ಸರ್ಕಾರ ಕೂಡಾ ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಜಾರಿಗೆ ಸುಗ್ರೀವಾಜ್ಞೆ ತಂದಿದ್ದಾರೆ. ಶ್ರೀಮಂತರ ಉದ್ದಾರವೇ ಸರ್ಕಾರದ ಗುರಿ ಎಂದರು.</p>.<p><strong>ಪುಷ್ಪಾರ್ಚನೆ: </strong>ಗಾಂಧೀಜಿ ಮತ್ತು ಶಾಸ್ತ್ರಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ವೇಳೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಪಕ್ಷದ ಹಕ್ಕೊತ್ತಾಯ ಸಲ್ಲಿಸಲಾಯಿತು.</p>.<p>ಶಾಸಕರಾದ ತನ್ವೀರ್ ಸೇಠ್, ಅನಿಲ್ ಕುಮಾರ್, ಮುಖಂಡರಾದ ಆರ್.ಧ್ರುವನಾರಾಯಣ, ವಾಸು, ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>