<p><strong>ಮೈಸೂರು:</strong> ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ಎನ್ಆರ್ಸಿ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ಮಸೂದೆಯು ಬೇರೆ ದೇಶದಿಂದ ಭಾರತಕ್ಕೆ ಬಂದ ಹಿಂದೂ, ಕ್ರೈಸ್ತ, ಬೌದ್ಧ, ಜೈನ, ಪಾರ್ಸಿ ಹಾಗೂ ಸಿಖ್ ಸಮುದಾಯಗಳ ಜನರಿಗೆ ಮಾತ್ರ ಪೌರತ್ವ ನೀಡಿ, ಮುಸ್ಲಿಮರನ್ನು ನುಸುಳುಕೋರರು ಎಂದು ಪರಿಗಣಿಸಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.</p>.<p>ನಮ್ಮ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ವಿಭಾಗಿಸುವುದು ಸಂವಿಧಾನ ವಿರೋಧಿ ಕ್ರಮ. ಈಗಾಗಲೇ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಹಲವರು ಇದನ್ನು ವಿರೋಧಿಸಿದ್ದಾರೆ ಎಂದು ಹೇಳಿದರು.</p>.<p>ಎಲ್ಲ ನಿರಾಶ್ರಿತರ ಬಗ್ಗೆ ಕೇಂದ್ರಕ್ಕೆ ಕಾಳಜಿ ಇರುವುದು ನಿಜವೇ ಆಗಿದ್ದರೆ ಶ್ರೀಲಂಕಾ ಮತ್ತು ಬರ್ಮಾ ದೇಶಗಳ ಪ್ರಸ್ತಾವ ಏಕಿಲ್ಲ ಎಂದು ಪ್ರಶ್ನಿಸಿದರು.</p>.<p>ರಾಷ್ಟ್ರೀಯ ಪೌರತ್ವ ನೋಂದಣಿಯೂ ಆತಂಕಕಾರಿಯಾಗಿದೆ. 40ರಿಂದ 50 ವರ್ಷಗಳಷ್ಟು ಹಳೆಯದಾದ ಪೌರತ್ವ ದಾಖಲೆಗಳು ಇಲ್ಲದಿರುವವರೆಲ್ಲರೂ ಅಕ್ರಮ ವಲಸಿಗರಾಗುತ್ತಾರೆ. ಆದರೆ, ಬಡವರಿಗೆ, ಭೂಹೀನ ಕೃಷಿ ಕಾರ್ಮಿಕರಿಗೆ, ಆದಿವಾಸಿಗಳಿಗೆ ಈ ಬಗೆಯ ಪೌರತ್ವ ದಾಖಲೆಗಳೇ ಇಲ್ಲ. ಇದರಿಂದ ಎಲ್ಲರಲ್ಲೂ ಅಭದ್ರತೆ ಭಾವನೆ ಸೃಷ್ಟಿಯಾಗಿದೆ ಎಂದು ದೂರಿದರು.</p>.<p>ದೇಶದ ಆರ್ಥಿಕತೆಯ ಕುಸಿತ, ಉದ್ಯೋಗ ನಾಶ, ಬೆಲೆ ಏರಿಕೆಗಳಂತಹ ಸಮಸ್ಯೆಗಳನ್ನು ಪರಿಹರಿಸಲಾಗದ ಕೇಂದ್ರ ಸರ್ಕಾರ ಜನರ ಒಗ್ಗಟ್ಟನ್ನು ಒಡೆದು, ಅವರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರದ ಭಾಗ ಇದು ಎಂದು ಅವರು ಆರೋಪಿಸಿದರು.</p>.<p>ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ಎನ್ಆರ್ಸಿ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ಮಸೂದೆಯು ಬೇರೆ ದೇಶದಿಂದ ಭಾರತಕ್ಕೆ ಬಂದ ಹಿಂದೂ, ಕ್ರೈಸ್ತ, ಬೌದ್ಧ, ಜೈನ, ಪಾರ್ಸಿ ಹಾಗೂ ಸಿಖ್ ಸಮುದಾಯಗಳ ಜನರಿಗೆ ಮಾತ್ರ ಪೌರತ್ವ ನೀಡಿ, ಮುಸ್ಲಿಮರನ್ನು ನುಸುಳುಕೋರರು ಎಂದು ಪರಿಗಣಿಸಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.</p>.<p>ನಮ್ಮ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ವಿಭಾಗಿಸುವುದು ಸಂವಿಧಾನ ವಿರೋಧಿ ಕ್ರಮ. ಈಗಾಗಲೇ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಹಲವರು ಇದನ್ನು ವಿರೋಧಿಸಿದ್ದಾರೆ ಎಂದು ಹೇಳಿದರು.</p>.<p>ಎಲ್ಲ ನಿರಾಶ್ರಿತರ ಬಗ್ಗೆ ಕೇಂದ್ರಕ್ಕೆ ಕಾಳಜಿ ಇರುವುದು ನಿಜವೇ ಆಗಿದ್ದರೆ ಶ್ರೀಲಂಕಾ ಮತ್ತು ಬರ್ಮಾ ದೇಶಗಳ ಪ್ರಸ್ತಾವ ಏಕಿಲ್ಲ ಎಂದು ಪ್ರಶ್ನಿಸಿದರು.</p>.<p>ರಾಷ್ಟ್ರೀಯ ಪೌರತ್ವ ನೋಂದಣಿಯೂ ಆತಂಕಕಾರಿಯಾಗಿದೆ. 40ರಿಂದ 50 ವರ್ಷಗಳಷ್ಟು ಹಳೆಯದಾದ ಪೌರತ್ವ ದಾಖಲೆಗಳು ಇಲ್ಲದಿರುವವರೆಲ್ಲರೂ ಅಕ್ರಮ ವಲಸಿಗರಾಗುತ್ತಾರೆ. ಆದರೆ, ಬಡವರಿಗೆ, ಭೂಹೀನ ಕೃಷಿ ಕಾರ್ಮಿಕರಿಗೆ, ಆದಿವಾಸಿಗಳಿಗೆ ಈ ಬಗೆಯ ಪೌರತ್ವ ದಾಖಲೆಗಳೇ ಇಲ್ಲ. ಇದರಿಂದ ಎಲ್ಲರಲ್ಲೂ ಅಭದ್ರತೆ ಭಾವನೆ ಸೃಷ್ಟಿಯಾಗಿದೆ ಎಂದು ದೂರಿದರು.</p>.<p>ದೇಶದ ಆರ್ಥಿಕತೆಯ ಕುಸಿತ, ಉದ್ಯೋಗ ನಾಶ, ಬೆಲೆ ಏರಿಕೆಗಳಂತಹ ಸಮಸ್ಯೆಗಳನ್ನು ಪರಿಹರಿಸಲಾಗದ ಕೇಂದ್ರ ಸರ್ಕಾರ ಜನರ ಒಗ್ಗಟ್ಟನ್ನು ಒಡೆದು, ಅವರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರದ ಭಾಗ ಇದು ಎಂದು ಅವರು ಆರೋಪಿಸಿದರು.</p>.<p>ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>