<p><strong>ಮೈಸೂರು: </strong>ವಿದ್ಯುತ್ ವಿತರಣಾ ವ್ಯವಸ್ಥೆಯ ಖಾಸಗೀಕರಣಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.</p>.<p>ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉದ್ದೇಶಿತ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<p>ಇಡೀ ವಿದ್ಯುತ್ ಕ್ಷೇತ್ರವನ್ನೇ ಖಾಸಗಿಯವರಿಗೆ ಒಪ್ಪಿಸುವ ಷಡ್ಯಂತ್ರ ಇದರ ಹಿಂದಿದೆ. ತಿದ್ದುಪಡಿಯಿಂದ ರೈತರು ಹಾಗೂ ಬಡವರಿಗೆ ತೊಂದರೆಯಾಗಲಿದೆ. ಹೀಗಾಗಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ತಿದ್ದುಪಡಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.</p>.<p>ಒಂದು ವೇಳೆ ತಿದ್ದುಪಡಿ ಜಾರಿಗೆ ಬಂದರೆ ರಾಜ್ಯದ 22 ಲಕ್ಷದ ಪಂಪ್ಸೆಟ್ದಾರರು ಬೀದಿಗಿಳಿದು ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ ಅವರು, ಕೊನೆಯ ಹಂತದಲ್ಲಿ ಶಾಂತಿಯುತವಾಗಿ ಅಸಹಕಾರ ಚಳವಳಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಬಹುತೇಕ ಎಲ್ಲ ರಂಗಗಳನ್ನು ಖಾಸಗೀಕರಣ ಮಾಡಿದ್ದಾರೆ. ಸಂಸತ್ತು ಮತ್ತು ವಿಧಾನಸಭೆಗಳನ್ನು ಖಾಸಗೀಕರಣ ಮಾಡುವುದು ಯಾವಾಗ ಎಂದು ಅವರು ಪ್ರಶ್ನಿಸಿದರು.</p>.<p>ಮಿಡತೆಗಳು ರಾಜ್ಯದ ಹೊಲಗಳಿಗೆ ದಾಳಿ ಮೊದಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಚಾಮರಾಜನಗರ ಮತ್ತು ಗುಂಡ್ಲುಪೇಟೆ ಭಾಗಗಳಲ್ಲಿ ಸಣ್ಣ ಈರುಳ್ಳಿಯು ರೋಗಕ್ಕೆ ತುತ್ತಾಗಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿದ್ಯುತ್ ವಿತರಣಾ ವ್ಯವಸ್ಥೆಯ ಖಾಸಗೀಕರಣಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.</p>.<p>ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉದ್ದೇಶಿತ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<p>ಇಡೀ ವಿದ್ಯುತ್ ಕ್ಷೇತ್ರವನ್ನೇ ಖಾಸಗಿಯವರಿಗೆ ಒಪ್ಪಿಸುವ ಷಡ್ಯಂತ್ರ ಇದರ ಹಿಂದಿದೆ. ತಿದ್ದುಪಡಿಯಿಂದ ರೈತರು ಹಾಗೂ ಬಡವರಿಗೆ ತೊಂದರೆಯಾಗಲಿದೆ. ಹೀಗಾಗಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ತಿದ್ದುಪಡಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.</p>.<p>ಒಂದು ವೇಳೆ ತಿದ್ದುಪಡಿ ಜಾರಿಗೆ ಬಂದರೆ ರಾಜ್ಯದ 22 ಲಕ್ಷದ ಪಂಪ್ಸೆಟ್ದಾರರು ಬೀದಿಗಿಳಿದು ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ ಅವರು, ಕೊನೆಯ ಹಂತದಲ್ಲಿ ಶಾಂತಿಯುತವಾಗಿ ಅಸಹಕಾರ ಚಳವಳಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಬಹುತೇಕ ಎಲ್ಲ ರಂಗಗಳನ್ನು ಖಾಸಗೀಕರಣ ಮಾಡಿದ್ದಾರೆ. ಸಂಸತ್ತು ಮತ್ತು ವಿಧಾನಸಭೆಗಳನ್ನು ಖಾಸಗೀಕರಣ ಮಾಡುವುದು ಯಾವಾಗ ಎಂದು ಅವರು ಪ್ರಶ್ನಿಸಿದರು.</p>.<p>ಮಿಡತೆಗಳು ರಾಜ್ಯದ ಹೊಲಗಳಿಗೆ ದಾಳಿ ಮೊದಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಚಾಮರಾಜನಗರ ಮತ್ತು ಗುಂಡ್ಲುಪೇಟೆ ಭಾಗಗಳಲ್ಲಿ ಸಣ್ಣ ಈರುಳ್ಳಿಯು ರೋಗಕ್ಕೆ ತುತ್ತಾಗಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>