ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಇದು ಗಂಭೀರ ವಿಚಾರವಾಗಿದ್ದು, ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ಮುಂದಾಗಬೇಕು. ಈಶ್ವರಪ್ಪ ರಾಜೀನಾಮೆ ನೀಡದಿದ್ದರೆ, ಮುಖ್ಯಮಂತ್ರಿ ಅವರು ರಾಜೀನಾಮೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. ರಾಜೀನಾಮೆ ನೀಡದಿದ್ದರೆ ರೈತ ಸಂಘ ರಾಜಭವನಕ್ಕೆ ಮುತ್ತಿಗೆ ಹಾಕಲಿದೆ’ ಎಂದು ಎಚ್ಚರಿಸಿದರು.