<p><strong>ಮೈಸೂರು: </strong>ಆನ್ಲೈನ್ ಶಿಕ್ಷಣವನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿಗಳು ನಿತ್ಯ 2ರಿಂದ 3 ಗಂಟೆಗಳ ಕಾಲ ನಿರಂತರವಾಗಿ ಮೊಬೈಲ್ ಬಳಕೆ ಮಾಡುವುದರಿಂದ ಕಣ್ಣಿಗೆ ಮತ್ತು ಮಿದುಳಿನ ಭಾಗಗಳಿಗೆ ಹಾನಿಯಾಗುತ್ತದೆ. ವಿಶ್ವಸಂಸ್ಥೆಯೂ ಆನ್ಲೈನ್ ಶಿಕ್ಷಣದಿಂದಾಗುವ ಮಾರಕ ಪರಿಣಾಮಗಳನ್ನು ಕುರಿತು ಎಚ್ಚರಿಕೆ ನೀಡಿದೆ. ಹೀಗಿರುವಾಗ, ಆನ್ಲೈನ್ ಶಿಕ್ಷಣ ಪದ್ಧತಿ ಜಾರಿಗೊಳಿಸುವುದು ಸರಿಯಲ್ಲ ಎಂದು ಕಾರ್ಯಕರ್ತರು ಹರಿಹಾಯ್ದರು.</p>.<p>ನಿತ್ಯ ಮಕ್ಕಳನ್ನು ವೈದ್ಯರಿಂದ ತಪಾಸಣೆ ನಡೆಸಿ, ನಿರ್ದಿಷ್ಟ ಸಂಖ್ಯೆಯ ಮಕ್ಕಳಿಗೆ ನೇರವಾಗಿಯೇ ಶಿಕ್ಷಣ ನೀಡಬಹುದು. ಪರ್ಯಾಯ ಮಾರ್ಗಗಳನ್ನು ಹುಡುಕಬೇಕು. ಇದನ್ನು ಬಿಟ್ಟು ಏಕಾಏಕಿ ಆನ್ಲೈನ್ ಶಿಕ್ಷಣವನ್ನು ಜಾರಿಗೊಳಿಸಬಾರದು ಎಂದು ಕಿಡಿಕಾರಿದರು.</p>.<p>ಆನ್ಲೈನ್ ಶಿಕ್ಷಣಕ್ಕೆ ಒತ್ತಾಯಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕಿರಗಸೂರು ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಆನ್ಲೈನ್ ಶಿಕ್ಷಣವನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿಗಳು ನಿತ್ಯ 2ರಿಂದ 3 ಗಂಟೆಗಳ ಕಾಲ ನಿರಂತರವಾಗಿ ಮೊಬೈಲ್ ಬಳಕೆ ಮಾಡುವುದರಿಂದ ಕಣ್ಣಿಗೆ ಮತ್ತು ಮಿದುಳಿನ ಭಾಗಗಳಿಗೆ ಹಾನಿಯಾಗುತ್ತದೆ. ವಿಶ್ವಸಂಸ್ಥೆಯೂ ಆನ್ಲೈನ್ ಶಿಕ್ಷಣದಿಂದಾಗುವ ಮಾರಕ ಪರಿಣಾಮಗಳನ್ನು ಕುರಿತು ಎಚ್ಚರಿಕೆ ನೀಡಿದೆ. ಹೀಗಿರುವಾಗ, ಆನ್ಲೈನ್ ಶಿಕ್ಷಣ ಪದ್ಧತಿ ಜಾರಿಗೊಳಿಸುವುದು ಸರಿಯಲ್ಲ ಎಂದು ಕಾರ್ಯಕರ್ತರು ಹರಿಹಾಯ್ದರು.</p>.<p>ನಿತ್ಯ ಮಕ್ಕಳನ್ನು ವೈದ್ಯರಿಂದ ತಪಾಸಣೆ ನಡೆಸಿ, ನಿರ್ದಿಷ್ಟ ಸಂಖ್ಯೆಯ ಮಕ್ಕಳಿಗೆ ನೇರವಾಗಿಯೇ ಶಿಕ್ಷಣ ನೀಡಬಹುದು. ಪರ್ಯಾಯ ಮಾರ್ಗಗಳನ್ನು ಹುಡುಕಬೇಕು. ಇದನ್ನು ಬಿಟ್ಟು ಏಕಾಏಕಿ ಆನ್ಲೈನ್ ಶಿಕ್ಷಣವನ್ನು ಜಾರಿಗೊಳಿಸಬಾರದು ಎಂದು ಕಿಡಿಕಾರಿದರು.</p>.<p>ಆನ್ಲೈನ್ ಶಿಕ್ಷಣಕ್ಕೆ ಒತ್ತಾಯಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕಿರಗಸೂರು ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>