<p><strong>ಮೈಸೂರು: </strong>ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಎಸ್ಡಿಪಿಐ ಹಾಗೂ ರಾಜ್ಯ ದಲಿತ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಪುರಭವನದ ಬಳಿ ಸೇರಿದ ಎಸ್ಡಿಪಿಐ ಕಾರ್ಯಕರ್ತರು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಉತ್ತರ ಪ್ರದೇಶದಲ್ಲಿ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ಅಲ್ಲಿ ಗೌರವಯುತವಾಗಿ ಜೀವನ ಸಾಗಿಸಲು ಆಗುತ್ತಿಲ್ಲ ಎಂದು ಖಂಡಿಸಿದರು.</p>.<p>‘ಜಂಗಲ್ ರಾಜ್’ ಎಂಬ ಪದ ಉತ್ತರ ಪ್ರದೇಶಕ್ಕೆ ಹೆಚ್ಚು ಸೂಕ್ತವೆನಿಸುತ್ತದೆ. ಯಾವುದೇ ನೈತಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳು, ಮಾನವೀಯತೆಗೆ ಅಲ್ಲಿ ಗೌರವವಿಲ್ಲದಂತಾಗಿದೆ. ಅತ್ಯಾಚಾರಿಗಳು ಮತ್ತು ಅಪರಾಧಿಗಳು ಅಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಅವರು ದೂರಿದರು.</p>.<p>ಜಿಲ್ಲಾಧ್ಯಕ್ಷ ಅಮ್ಜದ್ ಖಾನ್, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಕುಮಾರಸ್ವಾಮಿ, ಮುಖಂಡರಾದ ತಬ್ರೇಜ್ ಸೇಠ್, ಮೌಲಾನಾ ಇಸ್ಮಾಯಿಲ್ ಪಾಲ್ಗೊಂಡಿದ್ದರು.</p>.<p>ರಾಜ್ಯ ದಲಿತ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ವಿಫಲವಾಗಿರುವ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p>ಎಂ.ಪರಮೇಶ, ಎಂ.ರಾಜಣ್ಣ, ನಂಜಪ್ಪ, ಚಂದ್ರು, ಮಹದೇವಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಎಸ್ಡಿಪಿಐ ಹಾಗೂ ರಾಜ್ಯ ದಲಿತ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಪುರಭವನದ ಬಳಿ ಸೇರಿದ ಎಸ್ಡಿಪಿಐ ಕಾರ್ಯಕರ್ತರು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಉತ್ತರ ಪ್ರದೇಶದಲ್ಲಿ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ಅಲ್ಲಿ ಗೌರವಯುತವಾಗಿ ಜೀವನ ಸಾಗಿಸಲು ಆಗುತ್ತಿಲ್ಲ ಎಂದು ಖಂಡಿಸಿದರು.</p>.<p>‘ಜಂಗಲ್ ರಾಜ್’ ಎಂಬ ಪದ ಉತ್ತರ ಪ್ರದೇಶಕ್ಕೆ ಹೆಚ್ಚು ಸೂಕ್ತವೆನಿಸುತ್ತದೆ. ಯಾವುದೇ ನೈತಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳು, ಮಾನವೀಯತೆಗೆ ಅಲ್ಲಿ ಗೌರವವಿಲ್ಲದಂತಾಗಿದೆ. ಅತ್ಯಾಚಾರಿಗಳು ಮತ್ತು ಅಪರಾಧಿಗಳು ಅಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಅವರು ದೂರಿದರು.</p>.<p>ಜಿಲ್ಲಾಧ್ಯಕ್ಷ ಅಮ್ಜದ್ ಖಾನ್, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಕುಮಾರಸ್ವಾಮಿ, ಮುಖಂಡರಾದ ತಬ್ರೇಜ್ ಸೇಠ್, ಮೌಲಾನಾ ಇಸ್ಮಾಯಿಲ್ ಪಾಲ್ಗೊಂಡಿದ್ದರು.</p>.<p>ರಾಜ್ಯ ದಲಿತ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ವಿಫಲವಾಗಿರುವ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p>ಎಂ.ಪರಮೇಶ, ಎಂ.ರಾಜಣ್ಣ, ನಂಜಪ್ಪ, ಚಂದ್ರು, ಮಹದೇವಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>