ಮೈಸೂರು: ಮಠಾಧಿಪತಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಇಲ್ಲಿನ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕಾವಿ ಕಳಚಿ ಖಾಧಿ ಧರಿಸಿ ಎಂದು ಆಗ್ರಹಿಸಿ ಅವರು ಘೋಷಣೆಗಳನ್ನು ಕೂಗಿದರು.ವೇದಿಕೆಯ ಸಂಚಾಲಕ ಕೆ.ಎಸ್.ಶಿವರಾಮ್ ಸೇರಿದಂತೆ ಇತರ ಕಾರ್ಯಕರ್ತರು ಕಾವಿ ಧರಿಸಿ ಪ್ರತಿಭಟನೆ ನಡೆಸಿದರು.