<p><strong>ಮೈಸೂರು:</strong> ತಾಲ್ಲೂಕಿನ ನಾಗನಹಳ್ಳಿಯ ರೈತ ತರಬೇತಿ ಕೇಂದ್ರದ ಸಮೀಪ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಈ ಕೇಂದ್ರವು ಕೃಷಿ ವಿಶ್ವವಿದ್ಯಾಲಯದ ಒಂದು ಸಂಸ್ಥೆಯಾಗಿದ್ದು, ಐತಿಹಾಸಿಕ ಮಹತ್ವ ಹೊಂದಿದೆ. ಇದರ ಸಮೀಪದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಇಲ್ಲಿಗೆ ರೈತರು ಮಾತ್ರವೇ ತರಬೇತಿಗೆ ಬರುವುದಿಲ್ಲ. ಇಲ್ಲಿರುವ ಫಾರಂನ್ನು ವೀಕ್ಷಿಸಲು ಇತರೆ ರಾಜ್ಯಗಳಿಂದಲೂ ವಿಜ್ಞಾನಿಗಳು ಬರುತ್ತಾರೆ. ಕೃಷಿ ವಿಜ್ಞಾನಿಗಳಿಗೆ ಇದೊಂದು ರೀತಿಯಲ್ಲಿ ಪ್ರಯೋಗಶಾಲೆಯಾಗಿದೆ. ಮದ್ಯದಂಗಡಿ ತೆರೆಯುವುದರಿಂದ ಇವರಿಗೆಲ್ಲ ತೊಂದರೆಯಾಗುತ್ತದೆ ಎಂದು ಅವರು ಕಿಡಿಕಾರಿದರು.</p>.<p>ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಂತಹದ್ದೊಂದು ಒಳ್ಳೆಯ ಕೇಂದ್ರದ ಸ್ಥಾಪನೆಗೆ ಜಾಗ ನೀಡಿದ್ದರು. ಈಗಾಗಲೇ ಇದು ಶತಮಾನೋತ್ಸವ ಆಚರಿಸಿಕೊಂಡಿದೆ. ಕೃಷಿಗೆ ಪೂರಕವಾದ ವೈಜ್ಞಾನಿಕ ಚಟುವಟಿಕೆಗಳು ನಡೆಯಬೇಕಾದ ತಾಣದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗಾಯತ್ರಿ ವಿಜೇಂದ್ರ, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ಶ್ರೀನಿವಾಸ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತಾಲ್ಲೂಕಿನ ನಾಗನಹಳ್ಳಿಯ ರೈತ ತರಬೇತಿ ಕೇಂದ್ರದ ಸಮೀಪ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಈ ಕೇಂದ್ರವು ಕೃಷಿ ವಿಶ್ವವಿದ್ಯಾಲಯದ ಒಂದು ಸಂಸ್ಥೆಯಾಗಿದ್ದು, ಐತಿಹಾಸಿಕ ಮಹತ್ವ ಹೊಂದಿದೆ. ಇದರ ಸಮೀಪದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಇಲ್ಲಿಗೆ ರೈತರು ಮಾತ್ರವೇ ತರಬೇತಿಗೆ ಬರುವುದಿಲ್ಲ. ಇಲ್ಲಿರುವ ಫಾರಂನ್ನು ವೀಕ್ಷಿಸಲು ಇತರೆ ರಾಜ್ಯಗಳಿಂದಲೂ ವಿಜ್ಞಾನಿಗಳು ಬರುತ್ತಾರೆ. ಕೃಷಿ ವಿಜ್ಞಾನಿಗಳಿಗೆ ಇದೊಂದು ರೀತಿಯಲ್ಲಿ ಪ್ರಯೋಗಶಾಲೆಯಾಗಿದೆ. ಮದ್ಯದಂಗಡಿ ತೆರೆಯುವುದರಿಂದ ಇವರಿಗೆಲ್ಲ ತೊಂದರೆಯಾಗುತ್ತದೆ ಎಂದು ಅವರು ಕಿಡಿಕಾರಿದರು.</p>.<p>ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಂತಹದ್ದೊಂದು ಒಳ್ಳೆಯ ಕೇಂದ್ರದ ಸ್ಥಾಪನೆಗೆ ಜಾಗ ನೀಡಿದ್ದರು. ಈಗಾಗಲೇ ಇದು ಶತಮಾನೋತ್ಸವ ಆಚರಿಸಿಕೊಂಡಿದೆ. ಕೃಷಿಗೆ ಪೂರಕವಾದ ವೈಜ್ಞಾನಿಕ ಚಟುವಟಿಕೆಗಳು ನಡೆಯಬೇಕಾದ ತಾಣದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗಾಯತ್ರಿ ವಿಜೇಂದ್ರ, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ಶ್ರೀನಿವಾಸ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>