ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬೆಳ್ತೂರು ಮಹದೇವ್ ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆದಾಗಿನಿಂದಲೂ ಆ ರಾಜ್ಯದಲ್ಲಿ ಪರಿಶಿಷ್ಟ ಹಾಗೂ ತಳ ಸಮುದಾಯಗಳು ನೆಮ್ಮದಿಯ ಜೀವನ ನಡೆಸಲು ಆಗದಂತಾಗಿದೆ. ಮೇಲ್ಪಂಕ್ತಿ ಜನರಿಂದ ನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯ ನಡೆದಿದ್ದರೂ ಸರ್ಕಾರ ಮೌನವಹಿಸಿದ್ದರ ಫಲವೇ ಹಾಥರಸ್ ಜಿಲ್ಲೆಯ ಸಾಮೂಹಿಕ ಅತ್ಯಾಚಾರಕ್ಕೆ ಕಾರಣ’ ಎಂದು ಆರೋಪಿಸಿದರು.