<p><strong>ಹುಣಸೂರು</strong>: ಉತ್ತರಪ್ರದೇಶದ ಹಥರಾಸ್ ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಸದಸ್ಯರು ನಗರದ ಕಲ್ಪತರು ವೃತ್ತದಲ್ಲಿ ಪ್ರತಿಭಟಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬೆಳ್ತೂರು ಮಹದೇವ್ ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆದಾಗಿನಿಂದಲೂ ಆ ರಾಜ್ಯದಲ್ಲಿ ಪರಿಶಿಷ್ಟ ಹಾಗೂ ತಳ ಸಮುದಾಯಗಳು ನೆಮ್ಮದಿಯ ಜೀವನ ನಡೆಸಲು ಆಗದಂತಾಗಿದೆ. ಮೇಲ್ಪಂಕ್ತಿ ಜನರಿಂದ ನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯ ನಡೆದಿದ್ದರೂ ಸರ್ಕಾರ ಮೌನವಹಿಸಿದ್ದರ ಫಲವೇ ಹಾಥರಸ್ ಜಿಲ್ಲೆಯ ಸಾಮೂಹಿಕ ಅತ್ಯಾಚಾರಕ್ಕೆ ಕಾರಣ’ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ತಮ್ಮಡಹಳ್ಳಿ ಮಹದೇವ್, ಆದಿಜಾಂಬವ ಸಮುದಾಯದ ಜೆ.ಮಹದೇವ್, ಸಿಪಿಎಂ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ್ ಕಲ್ಕುಣಿಕೆ ಮಾತನಾಡಿದರು.</p>.<p>ಕಾಂತರಾಜ್, ಉದಯಕುಮಾರ್, ಮಹದೇವ್, ಕಿರಿಜಾಜಿ ಲೋಕೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಉತ್ತರಪ್ರದೇಶದ ಹಥರಾಸ್ ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಸದಸ್ಯರು ನಗರದ ಕಲ್ಪತರು ವೃತ್ತದಲ್ಲಿ ಪ್ರತಿಭಟಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬೆಳ್ತೂರು ಮಹದೇವ್ ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆದಾಗಿನಿಂದಲೂ ಆ ರಾಜ್ಯದಲ್ಲಿ ಪರಿಶಿಷ್ಟ ಹಾಗೂ ತಳ ಸಮುದಾಯಗಳು ನೆಮ್ಮದಿಯ ಜೀವನ ನಡೆಸಲು ಆಗದಂತಾಗಿದೆ. ಮೇಲ್ಪಂಕ್ತಿ ಜನರಿಂದ ನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯ ನಡೆದಿದ್ದರೂ ಸರ್ಕಾರ ಮೌನವಹಿಸಿದ್ದರ ಫಲವೇ ಹಾಥರಸ್ ಜಿಲ್ಲೆಯ ಸಾಮೂಹಿಕ ಅತ್ಯಾಚಾರಕ್ಕೆ ಕಾರಣ’ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ತಮ್ಮಡಹಳ್ಳಿ ಮಹದೇವ್, ಆದಿಜಾಂಬವ ಸಮುದಾಯದ ಜೆ.ಮಹದೇವ್, ಸಿಪಿಎಂ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ್ ಕಲ್ಕುಣಿಕೆ ಮಾತನಾಡಿದರು.</p>.<p>ಕಾಂತರಾಜ್, ಉದಯಕುಮಾರ್, ಮಹದೇವ್, ಕಿರಿಜಾಜಿ ಲೋಕೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>