ಈ ವೇಳೆ ದಕ್ಷಿಣಾಮೂರ್ತಿಯ ವಿಗ್ರಹವನ್ನು ಕದಲಿಸಿರುವುದು ಏಕೆ ಎಂದು ಮಠದಲ್ಲಿದ್ದ ರಾಮಕೃಷ್ಣ ಆಶ್ರಮದ ಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡರು. ಮರದ ಬೇರು ವಿಗ್ರಹದ ಕೆಳಗೆ ತೂರಿ ಬಂದು ವಿಗ್ರಹವು ವಾಲಿತ್ತು. ಹಾಗಾಗಿ, ಇದನ್ನು ತೆಗೆದು ಬೇರೆ ಕಡೆ ಪ್ರತಿಷ್ಠಾಪಿಸಲಾಗುವುದು ಎಂಬ ರಾಮಕೃಷ್ಣ ಆಶ್ರಮದ ಪ್ರತಿನಿಧಿಗಳ ಸಮಜಾಯಿಷಿಗೆ ಒಪ್ಪದ ಕೆಲವರು ಪ್ರತಿಭಟನೆ ಆರಂಭಿಸಿದರು. ಮತ್ತೆ ಕೆಲವರು ಭಜನೆ ನಡೆಸಿದರು. ಅಹೋರಾತ್ರಿ ಧರಣಿ ಮುಂದುವರಿಯಿತು. ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.