<p><strong>ಮೈಸೂರು</strong>: ಎಲ್ಲರಿಗೂ ಏಕರೀತಿಯ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯ ನೀಡಬೇಕು ಎಂದು ಭಾರತೀಯ ಪರಿವರ್ತನ ಸಂಘ (ಬಿಪಿಎಸ್)ದ ಕಾರ್ಯಕರ್ತರು ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಸೇರಿದ ಕಾರ್ಯಕರ್ತರು ಇದಕ್ಕಾಗಿ ಹೆಚ್ಚುವರಿಯಾಗಿ ತೆರಿಗೆ ಪಾವತಿಸಲೂ ಸಿದ್ಧ ಎಂದು ಘೋಷಿಸಿದರು.</p>.<p>ಈ ರೀತಿಯಾಗಬೇಕಾದರೆ ಮೊದಲು ಸರ್ಕಾರ ಈ ಎರಡೂ ಕ್ಷೇತ್ರಗಳನ್ನೂ ಸರ್ಕಾರೀಕರಣಗೊಳಿಸಬೇಕು. ಖಾಸಗಿಯವರಿಗೆ ಈ ಕ್ಷೇತ್ರವನ್ನು ನೀಡಬಾರದು ಎಂದು ಮನವಿ ಮಾಡಿದರು.</p>.<p>ಜೀವರಕ್ಷಕವಾದ ಔಷಧಗಳು ಹೆಚ್ಚು ಹಣ ನೀಡಿದರಷ್ಟೇ ಸಿಗುತ್ತಿದೆ. ಹಣ ಇಲ್ಲದವರಿಗೆ ಔಷಧವೂ ಇಲ್ಲ, ಚಿಕಿತ್ಸೆಯೂ ಇಲ್ಲ ಎಂಬಂತಾಗಿದೆ. ಇಂತಹ ವ್ಯವಸ್ಥೆ ಸರಿಯಲ್ಲ ಎಂದು ಅವರು ಟೀಕಿಸಿದರು.</p>.<p>ಆಕ್ಸಿಮೀಟರ್ನಂತಹ ಉಪಕರಣಗಳ ದರ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚಿನ ಹಣ ನೀಡಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. ಶಿಕ್ಷಣಕ್ಕೂ ಸಾರ್ವಜನಿಕರು ಹೆಚ್ಚಿನ ಹಣ ವ್ಯಯಿಸಬೇಕಿದೆ. ಇದಕ್ಕೆ ಆರೋಗ್ಯ ಮತ್ತು ಶಿಕ್ಷಣ ಈ ಎರಡೂ ಕ್ಷೇತ್ರಗಳನ್ನು ಖಾಸಗಿಯವರಿಗೆ ಬಿಟ್ಟು ಕೊಟ್ಟಿರುವುದರಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹರಿಹಾಯ್ದರು.</p>.<p>ಸರ್ಕಾರ ಕೂಡಲೇ ಈ ಎರಡೂ ಕ್ಷೇತ್ರಗಳಲ್ಲಿರುವ ಖಾಸಗಿಯವರ ಪಾರಮ್ಯವನ್ನು ಕೊನೆಗಾಣಿಸಬೇಕು. ಬೇಕಾದರೆ ಇನ್ನಷ್ಟು ತೆರಿಗೆ ವಿಧಿಸಲಿ. ಆದರೆ, ಈ ಎರಡೂ ಕ್ಷೇತ್ರಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡು, ಎಲ್ಲರಿಗೂ ಒಂದೇ ಬಗೆಯ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಸಂಚಾಲಕ ಸೋಸಲೆ ಸಿದ್ಧರಾಜು, ಮುಖಂಡರಾದ ಡಾ.ಶಿವಕುಮಾರ್, ಪ್ರತಾಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಎಲ್ಲರಿಗೂ ಏಕರೀತಿಯ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯ ನೀಡಬೇಕು ಎಂದು ಭಾರತೀಯ ಪರಿವರ್ತನ ಸಂಘ (ಬಿಪಿಎಸ್)ದ ಕಾರ್ಯಕರ್ತರು ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಸೇರಿದ ಕಾರ್ಯಕರ್ತರು ಇದಕ್ಕಾಗಿ ಹೆಚ್ಚುವರಿಯಾಗಿ ತೆರಿಗೆ ಪಾವತಿಸಲೂ ಸಿದ್ಧ ಎಂದು ಘೋಷಿಸಿದರು.</p>.<p>ಈ ರೀತಿಯಾಗಬೇಕಾದರೆ ಮೊದಲು ಸರ್ಕಾರ ಈ ಎರಡೂ ಕ್ಷೇತ್ರಗಳನ್ನೂ ಸರ್ಕಾರೀಕರಣಗೊಳಿಸಬೇಕು. ಖಾಸಗಿಯವರಿಗೆ ಈ ಕ್ಷೇತ್ರವನ್ನು ನೀಡಬಾರದು ಎಂದು ಮನವಿ ಮಾಡಿದರು.</p>.<p>ಜೀವರಕ್ಷಕವಾದ ಔಷಧಗಳು ಹೆಚ್ಚು ಹಣ ನೀಡಿದರಷ್ಟೇ ಸಿಗುತ್ತಿದೆ. ಹಣ ಇಲ್ಲದವರಿಗೆ ಔಷಧವೂ ಇಲ್ಲ, ಚಿಕಿತ್ಸೆಯೂ ಇಲ್ಲ ಎಂಬಂತಾಗಿದೆ. ಇಂತಹ ವ್ಯವಸ್ಥೆ ಸರಿಯಲ್ಲ ಎಂದು ಅವರು ಟೀಕಿಸಿದರು.</p>.<p>ಆಕ್ಸಿಮೀಟರ್ನಂತಹ ಉಪಕರಣಗಳ ದರ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚಿನ ಹಣ ನೀಡಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. ಶಿಕ್ಷಣಕ್ಕೂ ಸಾರ್ವಜನಿಕರು ಹೆಚ್ಚಿನ ಹಣ ವ್ಯಯಿಸಬೇಕಿದೆ. ಇದಕ್ಕೆ ಆರೋಗ್ಯ ಮತ್ತು ಶಿಕ್ಷಣ ಈ ಎರಡೂ ಕ್ಷೇತ್ರಗಳನ್ನು ಖಾಸಗಿಯವರಿಗೆ ಬಿಟ್ಟು ಕೊಟ್ಟಿರುವುದರಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹರಿಹಾಯ್ದರು.</p>.<p>ಸರ್ಕಾರ ಕೂಡಲೇ ಈ ಎರಡೂ ಕ್ಷೇತ್ರಗಳಲ್ಲಿರುವ ಖಾಸಗಿಯವರ ಪಾರಮ್ಯವನ್ನು ಕೊನೆಗಾಣಿಸಬೇಕು. ಬೇಕಾದರೆ ಇನ್ನಷ್ಟು ತೆರಿಗೆ ವಿಧಿಸಲಿ. ಆದರೆ, ಈ ಎರಡೂ ಕ್ಷೇತ್ರಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡು, ಎಲ್ಲರಿಗೂ ಒಂದೇ ಬಗೆಯ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಸಂಚಾಲಕ ಸೋಸಲೆ ಸಿದ್ಧರಾಜು, ಮುಖಂಡರಾದ ಡಾ.ಶಿವಕುಮಾರ್, ಪ್ರತಾಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>