ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತ ಮಾದೇಶ್, ‘ಈ ಹಿಂದೆಯೂ ಮದ್ಯದಂಗಡಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಬೇರೆಡೆ ಸ್ಥಳಾಂತರ ಮಾಡುವಂತೆ ಸೂಚನೆಯನ್ನೂ ನೀಡಲಾಗಿತ್ತು. ಆದರೆ, ನ್ಯಾಯಾಲಯವು ಅದೇ ಜಾಗದಲ್ಲಿ ಮದ್ಯದಂಗಡಿ ಮುಂದುವರಿಯಬೇಕು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಅದನ್ನು ಪೊಲೀಸರು ನಿಭಾಯಿಸಬೇಕು ಎಂದು ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದೆ’ ಎಂದು ತಿಳಿಸಿದ್ದಾರೆ.