<p><strong>ಮೈಸೂರು: </strong>ತಾಲ್ಲೂಕಿನ ರಮ್ಮನಹಳ್ಳಿಯ ಉಗ್ರನರಸಿಂಹ ಮದ್ಯದಂಗಡಿ ಸಮೀಪ ಸ್ಥಳೀಯ ನಿವಾಸಿ ಮಹದೇವು ಅವರಿಗೆ ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟರು. ಅಪಘಾತಕ್ಕೆ ಮದ್ಯ ಸೇವಿಸಿದ್ದೇ ಕಾರಣ ಎಂದು ಆರೋಪಿಸಿದ ಸ್ಥಳೀಯರು ಶುಕ್ರವಾರ ಮದ್ಯದಂಗಡಿ ಮುಂದೆ ಕೆಲಕಾಲ ಶವವಿರಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಸಮೀಪ ವೈನ್ಸ್ಟೋರ್ ಬೇಡ, ಈ ಕೂಡಲೇ ಬಾರ್ನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ‘ಅಪಘಾತಕ್ಕೂ, ಮದ್ಯದಂಗಡಿಗೂ ಸಂಬಂಧ ಇಲ್ಲ. ಸಾಕಷ್ಟು ದೂರದಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನವು ವೇಗವಾಗಿ ಹಾದು ಹೋಗಿದೆ. ಮೃತಪಟ್ಟ ವ್ಯಕ್ತಿಯೂ ಮದ್ಯ ಸೇವಿಸಿದ್ದರು ಎನ್ನುವುದಕ್ಕೆ ಆಧಾರ ಇಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತ ಮಾದೇಶ್, ‘ಈ ಹಿಂದೆಯೂ ಮದ್ಯದಂಗಡಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಬೇರೆಡೆ ಸ್ಥಳಾಂತರ ಮಾಡುವಂತೆ ಸೂಚನೆಯನ್ನೂ ನೀಡಲಾಗಿತ್ತು. ಆದರೆ, ನ್ಯಾಯಾಲಯವು ಅದೇ ಜಾಗದಲ್ಲಿ ಮದ್ಯದಂಗಡಿ ಮುಂದುವರಿಯಬೇಕು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಅದನ್ನು ಪೊಲೀಸರು ನಿಭಾಯಿಸಬೇಕು ಎಂದು ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ತಾಲ್ಲೂಕಿನ ರಮ್ಮನಹಳ್ಳಿಯ ಉಗ್ರನರಸಿಂಹ ಮದ್ಯದಂಗಡಿ ಸಮೀಪ ಸ್ಥಳೀಯ ನಿವಾಸಿ ಮಹದೇವು ಅವರಿಗೆ ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟರು. ಅಪಘಾತಕ್ಕೆ ಮದ್ಯ ಸೇವಿಸಿದ್ದೇ ಕಾರಣ ಎಂದು ಆರೋಪಿಸಿದ ಸ್ಥಳೀಯರು ಶುಕ್ರವಾರ ಮದ್ಯದಂಗಡಿ ಮುಂದೆ ಕೆಲಕಾಲ ಶವವಿರಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಸಮೀಪ ವೈನ್ಸ್ಟೋರ್ ಬೇಡ, ಈ ಕೂಡಲೇ ಬಾರ್ನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ‘ಅಪಘಾತಕ್ಕೂ, ಮದ್ಯದಂಗಡಿಗೂ ಸಂಬಂಧ ಇಲ್ಲ. ಸಾಕಷ್ಟು ದೂರದಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನವು ವೇಗವಾಗಿ ಹಾದು ಹೋಗಿದೆ. ಮೃತಪಟ್ಟ ವ್ಯಕ್ತಿಯೂ ಮದ್ಯ ಸೇವಿಸಿದ್ದರು ಎನ್ನುವುದಕ್ಕೆ ಆಧಾರ ಇಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತ ಮಾದೇಶ್, ‘ಈ ಹಿಂದೆಯೂ ಮದ್ಯದಂಗಡಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಬೇರೆಡೆ ಸ್ಥಳಾಂತರ ಮಾಡುವಂತೆ ಸೂಚನೆಯನ್ನೂ ನೀಡಲಾಗಿತ್ತು. ಆದರೆ, ನ್ಯಾಯಾಲಯವು ಅದೇ ಜಾಗದಲ್ಲಿ ಮದ್ಯದಂಗಡಿ ಮುಂದುವರಿಯಬೇಕು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಅದನ್ನು ಪೊಲೀಸರು ನಿಭಾಯಿಸಬೇಕು ಎಂದು ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>