ಎಐಯುಟಿಯುಸಿ ಜಿಲ್ಲಾ ಘಟಕದ ಜಂಟಿ ಕಾರ್ಯದರ್ಶಿ ಮುದ್ದು ಕೃಷ್ಣ ಮಾತನಾಡಿ, ‘ಕಾರ್ಖಾನೆಯಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರು ಕಳೆದ 22 ವರ್ಷಗಳಿಂದ ದುಡಿಯುತ್ತಿದ್ದಾರೆ. ಕಾರ್ಮಿಕರ ಗ್ರಾಜ್ಯುಟಿ ಹಣ ನೀಡುವಂತೆ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಹೀಗಾಗಿ,
ಏಕಾಏಕಿ ಮಂಗಳವಾರ ರಾತ್ರಿ ಪಾಳಿಯಿಂದ ಬೀಗಮುದ್ರೆ ಘೋಷಿಸಿ, ನೋಟಿಸ್ ಅಂಟಿಸಿದ್ದಾರೆ’ ಎಂದು ದೂರಿದರು.