<p><strong>ಮೈಸೂರು</strong>: ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆಯಲ್ಲಿ ತಮಿಳಿನ ನಾಮಫಲಕ ಹಾಕಿರುವುದನ್ನು ವಿರೋಧಿಸಿ ಜುಲೈ 26ರಂದು ಕೆಜಿಎಫ್ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.</p>.<p>ನಗರಸಭೆಗೆ ಆಯ್ಕೆಯಾದವರ ಪೈಕಿ ಮೂವರನ್ನು ಬಿಟ್ಟರೆ ಉಳಿದವರೆಲ್ಲರೂ ತಮಿಳರೇ ಆಗಿದ್ದಾರೆ. ಹೀಗಾಗಿ, ನಗರಸಭೆಯನ್ನು ಸೂಪರ್ಸೀಡ್ ಮಾಡಬೇಕು ಎಂದು ಅವರು ಇಲ್ಲಿ ಬುಧವಾರ ಒತ್ತಾಯಿಸಿದರು.</p>.<p>ಬ್ಯಾಂಕುಗಳಲ್ಲಿರುವ ಠೇವಣಿ ಕನ್ನಡಿಗರದ್ದು. ಆದರೆ, ಕೆಲಸ ಮಾಡುವವರು ಪರಭಾಷಿಕರು. ಕಾರ್ಖಾನೆಗಳು ಇಲ್ಲಿನ ಸರ್ಕಾರದಿಂದ ರಿಯಾಯಿತಿ ಪಡೆದು ಹೊರ ರಾಜ್ಯದವರಿಗೆ ಉದ್ಯೋಗ ನೀಡುತ್ತಿವೆ. ಈ ರೀತಿಯಾದರೆ ಮುಂದೆ ಕನ್ನಡಿಗರಿಗೆ ಉಳಿಗಾಲ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕನ್ನಡಿಗರಿಗೆ ಉದ್ಯೋಗ, ಚೆಕ್ಗಳು ಸೇರಿದಂತೆ ಎಲ್ಲ ವ್ಯವಹಾರಗಳೂ ಕನ್ನಡದಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಬ್ಯಾಂಕುಗಳಿಗೆ ನುಗ್ಗುವ ಚಳವಳಿಯನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದರು.</p>.<p>ಇದಕ್ಕೂ ಮುನ್ನ ಅವರು ಇಲ್ಲಿನ ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)ದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆಯಲ್ಲಿ ತಮಿಳಿನ ನಾಮಫಲಕ ಹಾಕಿರುವುದನ್ನು ವಿರೋಧಿಸಿ ಜುಲೈ 26ರಂದು ಕೆಜಿಎಫ್ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.</p>.<p>ನಗರಸಭೆಗೆ ಆಯ್ಕೆಯಾದವರ ಪೈಕಿ ಮೂವರನ್ನು ಬಿಟ್ಟರೆ ಉಳಿದವರೆಲ್ಲರೂ ತಮಿಳರೇ ಆಗಿದ್ದಾರೆ. ಹೀಗಾಗಿ, ನಗರಸಭೆಯನ್ನು ಸೂಪರ್ಸೀಡ್ ಮಾಡಬೇಕು ಎಂದು ಅವರು ಇಲ್ಲಿ ಬುಧವಾರ ಒತ್ತಾಯಿಸಿದರು.</p>.<p>ಬ್ಯಾಂಕುಗಳಲ್ಲಿರುವ ಠೇವಣಿ ಕನ್ನಡಿಗರದ್ದು. ಆದರೆ, ಕೆಲಸ ಮಾಡುವವರು ಪರಭಾಷಿಕರು. ಕಾರ್ಖಾನೆಗಳು ಇಲ್ಲಿನ ಸರ್ಕಾರದಿಂದ ರಿಯಾಯಿತಿ ಪಡೆದು ಹೊರ ರಾಜ್ಯದವರಿಗೆ ಉದ್ಯೋಗ ನೀಡುತ್ತಿವೆ. ಈ ರೀತಿಯಾದರೆ ಮುಂದೆ ಕನ್ನಡಿಗರಿಗೆ ಉಳಿಗಾಲ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕನ್ನಡಿಗರಿಗೆ ಉದ್ಯೋಗ, ಚೆಕ್ಗಳು ಸೇರಿದಂತೆ ಎಲ್ಲ ವ್ಯವಹಾರಗಳೂ ಕನ್ನಡದಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಬ್ಯಾಂಕುಗಳಿಗೆ ನುಗ್ಗುವ ಚಳವಳಿಯನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದರು.</p>.<p>ಇದಕ್ಕೂ ಮುನ್ನ ಅವರು ಇಲ್ಲಿನ ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)ದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>