ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.