ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ​ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ

Last Updated 31 ಡಿಸೆಂಬರ್ 2021, 8:25 IST
ಅಕ್ಷರ ಗಾತ್ರ

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ.

ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು ಕೋರಿದರು. ಆದರೆ ಪೊಲೀಸರು ಅವಕಾಶ ಕೊಡಲಿಲ್ಲ. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಕ್ರಾಂತಿಗೀತೆಗಳನ್ನು ಹಾಡುತ್ತಾ ಧರಣಿ ಕುಳಿತರು.

ಎಂದಿನಂತೆ ರಂಗಾಯಣದ ಮುಂದಿನ ರಸ್ತೆಯಲ್ಲಿ ಸಂಚಾರವನ್ನು ಕೆಲಕಾಲದ ಮಟ್ಟಿಗೆ ನಿರ್ಬಂಧಿಸಲಾಗಿತ್ತು.

ರಸ್ತೆಯ ಮತ್ತೊಂದು ತುದಿಯಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಬೆಂಬಲಿಗರುಮೌನ ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT