ರಂಗಾಯಣಕ್ಕೆ ಸಂಪರ್ಕ ಕಲ್ಪಿಸುವ ಹುಣಸೂರು ರಸ್ತೆಯ ಸಿಗ್ನಲ್ನಲ್ಲಿ ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಪ್ಪ ಅವರನ್ನು ಬೆಂಬಲಿಸಿ ಧರಣಿ ಕುಳಿತರೆ, ಕುಕ್ಕರಹಳ್ಳಿ ಸಮೀಪ ಕಾರ್ಯಪ್ಪ ಅವರನ್ನು ವಿರೋಧಿಸಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಮುಖಂಡರು ಧರಣಿ ಕುಳಿತರು. ಇದರಿಂದ ರಸ್ತೆಯ ಎರಡೂ ಬದಿಯನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ ಪೊಲೀಸರು ಸಂಚಾರವನ್ನು ನಿರ್ಬಂಧಿಸಿದರು.