<p><strong>ಮೈಸೂರು:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಭಾನುವಾರವೂ ಪ್ರತಿಭಟನೆಗಳು ನಡೆದವು.</p>.<p>ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ವತಿಯಿಂದ ಎಫ್ಟಿಎಸ್ ವೃತ್ತದ ಬಳಿ ಬೆಳಿಗ್ಗೆ ಪ್ರತಿಭಟನೆ ನಡೆಯಿತು.</p>.<p>ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿರುವುದಕ್ಕೆ ಈ ಘಟನೆಯೇ ಸಾಕ್ಷಿ. ಘಟನೆ ನಡೆದು 15 ದಿನಗಳ ಬಳಿಕ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಸರ್ಕಾರಕ್ಕೆ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದವರ ಮೇಲೆ ಇರುವ ಕಾಳಜಿ ಏನು ಎಂಬುದನ್ನು ಇದು ತೋರಿಸುತ್ತದೆ ಎಂದು ದೂರಿದರು.</p>.<p>‘ನನ್ನ ಮೇಲೆ ಅತ್ಯಾಚಾರ ನಡೆದಿದೆ’ ಎಂಬ ಹೇಳಿಕೆಯನ್ನು ಯುವತಿ ಸಾಯುವ ಮುನ್ನ ನೀಡಿದ್ದಳು. ಆದರೆ ಉತ್ತರ ಪ್ರದೇಶ ಸರ್ಕಾರ ಅತ್ಯಾಚಾರ ನಡೆದಿಲ್ಲ ಎಂದು ಸುಳ್ಳು ಹೇಳುತ್ತಿದೆ. ಪೊಲೀಸರು ಕುಟುಂಬದ ಸದಸ್ಯರ ಅಭಿಪ್ರಾಯ ಪಡೆಯದೆಯೇ ಶವ ಸುಟ್ಟುಹಾಕಿದ್ದಾರೆ. ಈ ಮೂಲಕ ಸಾಕ್ಷ್ಯಾಧಾರಗಳು ಸಿಗದ ಹಾಗೆ ಮಾಡಿದ್ದಾರೆ ಎಂದು ಟೀಕಿಸಿದರು.</p>.<p>ಉತ್ತರ ಪ್ರದೇಶದಲ್ಲಿ ಗೂಂಡಾ ಸರ್ಕಾರ ಇದೆ. ಯೋಗಿ ಆದಿತ್ಯನಾಥ್ ಅವರು ಜನಸಾಮಾನ್ಯರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ. ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದ್ದು, ಭಯದಿಂದ ಬದುಕುವಂತಾಗಿದೆ. ಪ್ರಧಾನಿ ಮಧ್ಯಪ್ರವೇಶಿಸಿ ಮಹಿಳೆಯರ ರಕ್ಷಣೆಗೆ ಕ್ರಮವಹಿಸಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.</p>.<p>ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಘವೇಂದ್ರ, ಎಸ್ಸಿ ಘಟಕದ ಅಧ್ಯಕ್ಷ ಸುನಂದ್ಕುಮಾರ್, ಜಗದೀಶ್, ಉದಯಕುಮಾರ್, ರಾಜು, ಎಸ್.ರಾಜೇಶ್, ನಂಜುಂಡ, ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಕರ್ನಾಟಕ ಪ್ರಜಾ ಪಾರ್ಟಿ ವತಿಯಿಂದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅತ್ಯಾಚಾರಿಗಳನ್ನು ಬಂಧಿಸಿ, ಗಲ್ಲಿಗೇರಿಸಬೇಕು. ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಆರ್.ಲೋಕೇಶ್, ಮೈಸೂರು ನಗರ ಅಧ್ಯಕ್ಷ ಎನ್.ಹರೀಶ್ ಇತರರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಭಾನುವಾರವೂ ಪ್ರತಿಭಟನೆಗಳು ನಡೆದವು.</p>.<p>ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ವತಿಯಿಂದ ಎಫ್ಟಿಎಸ್ ವೃತ್ತದ ಬಳಿ ಬೆಳಿಗ್ಗೆ ಪ್ರತಿಭಟನೆ ನಡೆಯಿತು.</p>.<p>ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿರುವುದಕ್ಕೆ ಈ ಘಟನೆಯೇ ಸಾಕ್ಷಿ. ಘಟನೆ ನಡೆದು 15 ದಿನಗಳ ಬಳಿಕ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಸರ್ಕಾರಕ್ಕೆ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದವರ ಮೇಲೆ ಇರುವ ಕಾಳಜಿ ಏನು ಎಂಬುದನ್ನು ಇದು ತೋರಿಸುತ್ತದೆ ಎಂದು ದೂರಿದರು.</p>.<p>‘ನನ್ನ ಮೇಲೆ ಅತ್ಯಾಚಾರ ನಡೆದಿದೆ’ ಎಂಬ ಹೇಳಿಕೆಯನ್ನು ಯುವತಿ ಸಾಯುವ ಮುನ್ನ ನೀಡಿದ್ದಳು. ಆದರೆ ಉತ್ತರ ಪ್ರದೇಶ ಸರ್ಕಾರ ಅತ್ಯಾಚಾರ ನಡೆದಿಲ್ಲ ಎಂದು ಸುಳ್ಳು ಹೇಳುತ್ತಿದೆ. ಪೊಲೀಸರು ಕುಟುಂಬದ ಸದಸ್ಯರ ಅಭಿಪ್ರಾಯ ಪಡೆಯದೆಯೇ ಶವ ಸುಟ್ಟುಹಾಕಿದ್ದಾರೆ. ಈ ಮೂಲಕ ಸಾಕ್ಷ್ಯಾಧಾರಗಳು ಸಿಗದ ಹಾಗೆ ಮಾಡಿದ್ದಾರೆ ಎಂದು ಟೀಕಿಸಿದರು.</p>.<p>ಉತ್ತರ ಪ್ರದೇಶದಲ್ಲಿ ಗೂಂಡಾ ಸರ್ಕಾರ ಇದೆ. ಯೋಗಿ ಆದಿತ್ಯನಾಥ್ ಅವರು ಜನಸಾಮಾನ್ಯರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ. ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದ್ದು, ಭಯದಿಂದ ಬದುಕುವಂತಾಗಿದೆ. ಪ್ರಧಾನಿ ಮಧ್ಯಪ್ರವೇಶಿಸಿ ಮಹಿಳೆಯರ ರಕ್ಷಣೆಗೆ ಕ್ರಮವಹಿಸಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.</p>.<p>ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಘವೇಂದ್ರ, ಎಸ್ಸಿ ಘಟಕದ ಅಧ್ಯಕ್ಷ ಸುನಂದ್ಕುಮಾರ್, ಜಗದೀಶ್, ಉದಯಕುಮಾರ್, ರಾಜು, ಎಸ್.ರಾಜೇಶ್, ನಂಜುಂಡ, ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಕರ್ನಾಟಕ ಪ್ರಜಾ ಪಾರ್ಟಿ ವತಿಯಿಂದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅತ್ಯಾಚಾರಿಗಳನ್ನು ಬಂಧಿಸಿ, ಗಲ್ಲಿಗೇರಿಸಬೇಕು. ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಆರ್.ಲೋಕೇಶ್, ಮೈಸೂರು ನಗರ ಅಧ್ಯಕ್ಷ ಎನ್.ಹರೀಶ್ ಇತರರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>