<p><strong>ಮೈಸೂರು</strong>: ಬೆಂಗಳೂರಿನಲ್ಲಿ ಸೋಮವಾರ ಸಚಿವ ಸುರೇಶ್ಕುಮಾರ್ ಅವರ ಮನೆಗೆ ಪರಸ್ಪರ ಅಂತರ ಕಾಯ್ದುಕೊಂಡು ಮನವಿ ಪತ್ರ ನೀಡಲು ತೆರಳಿದ್ದ ಹಲವು ಮಂದಿ ಹೋರಾಟಗಾರರನ್ನು ಬಂಧಿಸಿರುವುದು ಅಸಾಂವಿಧಾನಿಕ ಕ್ರಮ ಎಂದು ಸಿಐಟಿಯುನ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ಖಂಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಮುಂಭಾಗ ಸೇರಿದ ಕಾರ್ಯಕರ್ತರು ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಕ್ಷರ ದಾಸೋಹ ನೌಕರರು 5 ತಿಂಗಳುಗಳಿಂದಲೂ ತಮ್ಮ ಬೇಡಿಕೆಗಳ ಈಡೇರಿಕೆಗೆ ಅನೇಕ ಮನವಿ ಪತ್ರಗಳನ್ನು ನೀಡಿದ್ದಾರೆ. ಆದರೆ, ಅವುಗಳನ್ನು ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಉಪವಾಸ ಸತ್ಯಾಗ್ರಹ, ಧರಣಿ ಮೊದಲಾದ ಹೋರಾಟಗಳನ್ನೂ ಮಾಡಿದ್ದಾರೆ. ಸರ್ಕಾರ ಇವುಗಳನ್ನು ನಿರ್ಲಕ್ಷಿಸಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಈಗ ಸಚಿವರ ಮನೆಗೆ ಹೋಗಿ ಮನವಿ ಪತ್ರ ಕೊಡಲು ಹೊರಟಿದ್ದವರನ್ನೆಲ್ಲ ಬಂಧಿಸಿರುವುದನ್ನು ನೋಡಿದರೆ ನಾವು ಪ್ರಜಾಪ್ರಭುತ್ವದಲ್ಲಿದ್ದೇವೆಯೇ ಎಂಬ ಅನುಮಾನ ಬರುತ್ತದೆ. ಸರ್ಕಾರ ಕೂಡಲೇ ಬಂಧಿತರಾದವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ಅಧ್ಯಕ್ಷರಾದ ಕೆ.ಮಂಜುಳಾ, ಕಾರ್ಯದರ್ಶಿ ಸಾವಿತ್ರಿ, ಹೋರಾಟಗಾರರಾದ ಕೆ.ಬಸವರಾಜು, ಮೀನಾ, ಪುಟ್ಟಮಲ್ಲಯ್ಯ, ನೇತ್ರಾವತಿ, ಜಿ.ಜಯರಾಂ, ಎಸ್.ಮಂಗಳಾ ಇದ್ದರು.</p>.<p>ಶಾಸಕರ ರಕ್ಷಣೆಗೆ ಆಗ್ರಹ: ಬೆಂಗಳೂರಿನಲ್ಲಿ ಈಚೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಕರ್ನಾಟಕ ಪ್ರದೇಶ ಬೋವಿ ಕ್ಷೇಮಾಭ್ಯುದಯ ಸೇವಾ ಸಂಘದ ಕಾರ್ಯಕರ್ತರು ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಈ ಸಂಬಂಧ ಮನವಿ ಪತ್ರ ನೀಡಿದರು.</p>.<p>ಮನೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು. ಅವರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬೆಂಗಳೂರಿನಲ್ಲಿ ಸೋಮವಾರ ಸಚಿವ ಸುರೇಶ್ಕುಮಾರ್ ಅವರ ಮನೆಗೆ ಪರಸ್ಪರ ಅಂತರ ಕಾಯ್ದುಕೊಂಡು ಮನವಿ ಪತ್ರ ನೀಡಲು ತೆರಳಿದ್ದ ಹಲವು ಮಂದಿ ಹೋರಾಟಗಾರರನ್ನು ಬಂಧಿಸಿರುವುದು ಅಸಾಂವಿಧಾನಿಕ ಕ್ರಮ ಎಂದು ಸಿಐಟಿಯುನ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ಖಂಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಮುಂಭಾಗ ಸೇರಿದ ಕಾರ್ಯಕರ್ತರು ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಕ್ಷರ ದಾಸೋಹ ನೌಕರರು 5 ತಿಂಗಳುಗಳಿಂದಲೂ ತಮ್ಮ ಬೇಡಿಕೆಗಳ ಈಡೇರಿಕೆಗೆ ಅನೇಕ ಮನವಿ ಪತ್ರಗಳನ್ನು ನೀಡಿದ್ದಾರೆ. ಆದರೆ, ಅವುಗಳನ್ನು ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಉಪವಾಸ ಸತ್ಯಾಗ್ರಹ, ಧರಣಿ ಮೊದಲಾದ ಹೋರಾಟಗಳನ್ನೂ ಮಾಡಿದ್ದಾರೆ. ಸರ್ಕಾರ ಇವುಗಳನ್ನು ನಿರ್ಲಕ್ಷಿಸಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಈಗ ಸಚಿವರ ಮನೆಗೆ ಹೋಗಿ ಮನವಿ ಪತ್ರ ಕೊಡಲು ಹೊರಟಿದ್ದವರನ್ನೆಲ್ಲ ಬಂಧಿಸಿರುವುದನ್ನು ನೋಡಿದರೆ ನಾವು ಪ್ರಜಾಪ್ರಭುತ್ವದಲ್ಲಿದ್ದೇವೆಯೇ ಎಂಬ ಅನುಮಾನ ಬರುತ್ತದೆ. ಸರ್ಕಾರ ಕೂಡಲೇ ಬಂಧಿತರಾದವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ಅಧ್ಯಕ್ಷರಾದ ಕೆ.ಮಂಜುಳಾ, ಕಾರ್ಯದರ್ಶಿ ಸಾವಿತ್ರಿ, ಹೋರಾಟಗಾರರಾದ ಕೆ.ಬಸವರಾಜು, ಮೀನಾ, ಪುಟ್ಟಮಲ್ಲಯ್ಯ, ನೇತ್ರಾವತಿ, ಜಿ.ಜಯರಾಂ, ಎಸ್.ಮಂಗಳಾ ಇದ್ದರು.</p>.<p>ಶಾಸಕರ ರಕ್ಷಣೆಗೆ ಆಗ್ರಹ: ಬೆಂಗಳೂರಿನಲ್ಲಿ ಈಚೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಕರ್ನಾಟಕ ಪ್ರದೇಶ ಬೋವಿ ಕ್ಷೇಮಾಭ್ಯುದಯ ಸೇವಾ ಸಂಘದ ಕಾರ್ಯಕರ್ತರು ಶಾಸಕರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಈ ಸಂಬಂಧ ಮನವಿ ಪತ್ರ ನೀಡಿದರು.</p>.<p>ಮನೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು. ಅವರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>