ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲ ವಸ್ತುಗಳ ಬೆಲೆಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕಂಪನಿಗಳು, ಕಾರ್ಖಾನೆಗಳು ಸೇರಿದಂತೆ ಬಹುತೇಕ ಖಾಸಗಿ ವಲಯದಲ್ಲಿ ಸಂಬಳವನ್ನು ಕಡಿಮೆ ಮಾಡಲಾಗುತ್ತಿದೆ. ಉದ್ಯೋಗ ಕಡಿತದಂತಹ ಕ್ರಮಗಳನ್ನು ನಿರ್ದಾಕ್ಷೀಣ್ಯವಾಗಿ ಜಾರಿಗೊಳಿಸಲಾಗುತ್ತಿದೆ. ಇದರಿಂದ ಬಡವರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.