ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಮೈಸೂರು ಚಾಮರಾಜನಗರ ಜಿಲ್ಲಾ ಸುಸ್ಥಿರ ಸಾವಯವ ಕೃಷಿಕರ ಒಕ್ಕೂಟದ ನೇತೃತ್ವದಲ್ಲಿ ಸೇರಿದ ರೈತರು ಸರ್ಕಾರ ಈಚೆಗೆ ಭೂಸುಧಾರಣಾ ಕಾಯ್ದೆಗೆ ತಂದ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.