‘ಮೇಯರ್–ಉಪ ಮೇಯರ್ ಚುನಾವಣೆ ಸಂದರ್ಭ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತ್ರ ಪಾಲಿಕೆಗೆ ಬರುವ ಸಂಸದ ಪ್ರತಾಪ ಸಿಂಹ, ಕೌನ್ಸಿಲ್ ಸಭೆಗೆ ಹಾಜರಾಗಿ ವಿಷಯ ಪ್ರಸ್ತಾಪಿಸಲಿ. ಕೇಂದ್ರ–ರಾಜ್ಯದಲ್ಲಿ ಅವರದ್ದೇ ಸರ್ಕಾರವಿದೆ. ಈಗಲಾದರೂ ಅಭಿವೃದ್ಧಿಗೆ ಮುಂದಾಗಲಿ. ಚುನಾಯಿತ ಜನಪ್ರತಿನಿಧಿಗಳಿಗೆ ಬಾಯಿಗೆ ಬಂದಂತೆ ಮಾತನಾಡಿ ಅಪಮಾನ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.