ನಗರದ ಮಹಾರಾಜ, ಮಹಾರಾಣಿ, ಡಿ.ಬನುಮಯ್ಯ, ಕೃಷ್ಣರಾಜ, ಸಂತ ಫಿಲೋಮಿನಾ, ಜೆಎಸ್ಎಸ್, ಎಸ್ಬಿಆರ್ಆರ್ ಮಹಾಜನ, ಶಾರದಾ ವಿಲಾಸ ಪದವಿ ಪೂರ್ವ ಕಾಲೇಜು ಕಾಲೇಜಿನಲ್ಲಿ ಮತ್ತು ಜಿಲ್ಲೆಯ ತಾಲ್ಲೂಕು ಕೇಂದ್ರಸ್ಥಾನದಲ್ಲಿನ 7 ಸೇರಿ 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.