ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಿಗೆ 10 ವರ್ಷ ಕಠಿಣ ಶಿಕ್ಷೆ

Last Updated 18 ಅಕ್ಟೋಬರ್ 2020, 3:59 IST
ಅಕ್ಷರ ಗಾತ್ರ

ಮೈಸೂರು: ದೇವರ ದರ್ಶನದ ನೆಪದಲ್ಲಿ ಬಾಲಕಿಯನ್ನು ಬೈಕ್‌ನಲ್ಲಿ ಕರೆದೊಯ್ದು ನಂಜನಗೂಡು ತಾಲ್ಲೂಕಿನ ಕೂಗಲೂರು ಬಳಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮೈಸೂರಿನ ಎಫ್‌ಟಿಎಸ್‌ಸಿ–1 ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಿರಣ್‌ ಶಿಕ್ಷೆಗೊಳಗಾದ ವ್ಯಕ್ತಿ.

ಈತ 2018ರ ಜೂನ್‌ 27ರಂದು ಬಾಲಕಿಯನ್ನು ದೇವರ ದರ್ಶನದ ನೆಪದಲ್ಲಿ ತನ್ನ ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಈ ಪ್ರಕರಣ ದಾಖಲಿಸಿಕೊಂಡಿದ್ದ ನಂಜನಗೂಡು ಪಟ್ಟಣ ಪೊಲೀಸ್‌ ಠಾಣೆಯ ಸಿಪಿಐ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.

ಪ್ರಕರಣದ ವಾದ–ವಿವಾದ ಆಲಿಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಆರೋಪ ಸಾಬೀತಾಗಿದ್ದರಿಂದ, ಕಿರಣ್‌ಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ, ಮತ್ತೆ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ಆರೋಪಿ ಪಾವತಿಸುವ ದಂಡದ ಮೊತ್ತವನ್ನು ಬಾಲಕಿಗೆ ಕೊಡಬೇಕು. ಇದರ ಜೊತೆಗೆ ₹ 2 ಲಕ್ಷ ಪರಿಹಾರವನ್ನು ಪಡೆದುಕೊಳ್ಳಬೇಕು ಎಂದು ತಮ್ಮ ತೀರ್ಪಿನಲ್ಲಿ ಆದೇಶಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕರಾದ ಶಿವರುದ್ರಸ್ವಾಮಿ, ಎಂ.ಎಸ್.ಮಂಜುಳಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT