ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೈ.ಡಿ.ರಾಜಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕವಯತ್ರಿ, ಪೊಲೀಸ್ ಅಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕದಂಬ ರಂಗ ವೇದಿಕೆಯ ಅಧ್ಯಕ್ಷ ರಾಜಶೇಖರ ಕದಂಬ, ಮೂಗೂರು ನಂಜುಂಡಸ್ವಾಮಿ ಮತ್ತಿತರರಿದ್ದರು.