ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳವಾರವೂ ಮೃಗಾಲಯ ವೀಕ್ಷಿಸಿ

Last Updated 8 ಏಪ್ರಿಲ್ 2019, 20:05 IST
ಅಕ್ಷರ ಗಾತ್ರ

ಮೈಸೂರು/ ಕುಶಾಲನಗರ: ಶಾಲಾ, ಕಾಲೇಜುಗಳಿಗೆ ರಜೆ ಇರುವುದರಿಂದ ಏ. 16ರಿಂದ ಮೇ 14ರ ವರೆಗೆ ಪ್ರತಿ ಮಂಗಳವಾರ ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಉದ್ಯಾನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರವಾಸಿಗರಿಗೆ ನಿರ್ಬಂಧ : ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗೆ ಮದವೇರಿದ ಕಾರಣ ಪ್ರವಾಸಿಗರಿಗೆ ದುಬಾರೆ ಪ್ರವಾಸಿ ತಾಣ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಗೋಪಿ ಆನೆಗೆ ಮದವೇರಿದೆ. ಯಾವುದೇ ಅನಾಹುತ ಸಂಭವಿಸದಿರಲಿ ಎಂಬ ಮುನ್ನೆಚ್ಚರಿಕೆಯಿಂದ ಅರಣ್ಯ ಇಲಾಖೆಯು ಪ್ರವೇಶವನ್ನು ನಿರ್ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT