ಮೈಸೂರು/ ಕುಶಾಲನಗರ: ಶಾಲಾ, ಕಾಲೇಜುಗಳಿಗೆ ರಜೆ ಇರುವುದರಿಂದ ಏ. 16ರಿಂದ ಮೇ 14ರ ವರೆಗೆ ಪ್ರತಿ ಮಂಗಳವಾರ ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಉದ್ಯಾನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರವಾಸಿಗರಿಗೆ ನಿರ್ಬಂಧ : ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗೆ ಮದವೇರಿದ ಕಾರಣ ಪ್ರವಾಸಿಗರಿಗೆ ದುಬಾರೆ ಪ್ರವಾಸಿ ತಾಣ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಗೋಪಿ ಆನೆಗೆ ಮದವೇರಿದೆ. ಯಾವುದೇ ಅನಾಹುತ ಸಂಭವಿಸದಿರಲಿ ಎಂಬ ಮುನ್ನೆಚ್ಚರಿಕೆಯಿಂದ ಅರಣ್ಯ ಇಲಾಖೆಯು ಪ್ರವೇಶವನ್ನು ನಿರ್ಬಂಧಿಸಿದೆ.