‘ಮೈಸೂರಿನೊಂದಿಗೆ ಗಡಿ ಹಂಚಿಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಜ್ಯ ಸರ್ಕಾರದ ಪ್ರಸಕ್ತ ಆದೇಶದಂತೆ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಆದ್ದರಿಂದ ಮಂಡ್ಯ ಗಡಿಭಾಗದಲ್ಲಿನ ಚೆಕ್ಪೋಸ್ಟ್ ಸಕ್ರಿಯಗೊಳಿಸಿ, ಎಲ್ಲರ ತಪಾಸಣೆ ಅಧಿಕಾರವನ್ನು ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಳ್ಳುವೆ’ ಎಂದು ಸೋಮಶೇಖರ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.