ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪದ ಶಾಖಕ್ಕೆ ವೈರಸ್‌ ಸಾಯುತ್ತವೆ: ಶಾಸಕ ರಾಮದಾಸ್‌

Last Updated 4 ಏಪ್ರಿಲ್ 2020, 9:57 IST
ಅಕ್ಷರ ಗಾತ್ರ

ಮೈಸೂರು: ‘ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ವೈರಸ್‌ಗಳು ಎಲ್ಲೇ ಇದ್ದರೂ ದೀಪದ ಬೆಳಕಿನ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ’ ಎಂದು ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಶನಿವಾರ ಇಲ್ಲಿ ಹೇಳಿದರು.

ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಲು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದರಿಂದ ರಾಮದಾಸ್‌ ಮೈಸೂರು ನಗರದಲ್ಲಿ ಮೈಕ್‌ ಹಿಡಿದು ಪ್ರಚಾರದಲ್ಲಿ ತೊಡಗಿದ್ದಾರೆ.

ದಸರಾ ವಸ್ತು ಪ್ರದರ್ಶನದ ಮಾರುಕಟ್ಟೆಯಲ್ಲಿ ಮೇಣದ ಬತ್ತಿ ಮತ್ತು ಮಾಸ್ಕ್‌ಗಳನ್ನು ವಿತರಣೆ ಮಾಡಿದರು. ಈ ವೇಳೆ ಜನರು ಗುಂಪಾಗಿ ಬಂದು, ಮುಗಿಬಿದ್ದ ಘಟನೆಯೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT