<p><strong>ಮೈಸೂರು: ವಿ</strong>ಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸೋಮವಾರ ‘ಕೋದಂಡರಾಮ ಮಂದಿರ’ ಭಕ್ತರ ಪ್ರವೇಶಕ್ಕೆ ಮುಕ್ತವಾಯಿತು.</p>.<p>ಕೋವಿಡ್ ಹೆಚ್ಚುತ್ತಿರುವ ಕಾರಣ ವೇದಿಕೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡದೇ ಕೇವಲ ಧಾರ್ಮಿಕ ವಿಧಿವಿಧಾನಗಳಿಗಷ್ಟೇ ಸೀಮಿತವಾಗಿ ಅತ್ಯಂತ ಸರಳವಾಗಿ ಉದ್ಘಾಟನಾ ಕಾರ್ಯ ನೆರವೇರಿಸಲಾಯಿತು. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಇದರಲ್ಲಿ ಭಾಗಿಯಾದರು.</p>.<p>ಗಣಪತಿ ಹೋಮ ಮತ್ತು ಮಹಾಚಂಡಿಕಾ ಯಾಗಗಳು ನಡೆದವು. ದೇಗುಲದ ಮೇಲಿನ ಕಳಸ ಹಾಗೂ ಗರ್ಭಗುಡಿಯಲ್ಲಿನ ಮೂರ್ತಿಗಳನ್ನು ಪುನರ್ ಸ್ಥಾಪಿಸಲಾಯಿತು. ದೇವಸ್ಥಾನದ ಒಳಾಂಗಣದಲ್ಲಿ ವಿಷ್ಣುವಿನ ದಶಾವತಾರದ ಮೂರ್ತಿಗಳನ್ನಿಟ್ಟಿರುವುದು ವಿಶೇಷ. ಇದಕ್ಕಾಗಿ ತಮಿಳುನಾಡಿನಿಂದ ಶಿಲ್ಪಿಗಳನ್ನು ಇಲ್ಲಿಗೆ ಕರೆಸಲಾಗಿತ್ತು.</p>.<p>ಸುಮಾರು ನೂರು ವರ್ಷದಷ್ಟು ಹಳೆಯದಾದ ಈ ಮಂದಿರವನ್ನು ಸಿದ್ದರಾಮಯ್ಯ ಅವರ ಕುಟುಂಬದವರು ಗ್ರಾಮಸ್ಥರೊಂದಿಗೆ ಸೇರಿ ಈಚೆಗೆ ಜೀರ್ಣೋದ್ಧಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಬಂದರೆ ಜನರು ಹೆಚ್ಚು ಸೇರಬಹುದು ಎಂಬ ಕಾರಣಕ್ಕೆ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ವಿ</strong>ಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸೋಮವಾರ ‘ಕೋದಂಡರಾಮ ಮಂದಿರ’ ಭಕ್ತರ ಪ್ರವೇಶಕ್ಕೆ ಮುಕ್ತವಾಯಿತು.</p>.<p>ಕೋವಿಡ್ ಹೆಚ್ಚುತ್ತಿರುವ ಕಾರಣ ವೇದಿಕೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡದೇ ಕೇವಲ ಧಾರ್ಮಿಕ ವಿಧಿವಿಧಾನಗಳಿಗಷ್ಟೇ ಸೀಮಿತವಾಗಿ ಅತ್ಯಂತ ಸರಳವಾಗಿ ಉದ್ಘಾಟನಾ ಕಾರ್ಯ ನೆರವೇರಿಸಲಾಯಿತು. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಇದರಲ್ಲಿ ಭಾಗಿಯಾದರು.</p>.<p>ಗಣಪತಿ ಹೋಮ ಮತ್ತು ಮಹಾಚಂಡಿಕಾ ಯಾಗಗಳು ನಡೆದವು. ದೇಗುಲದ ಮೇಲಿನ ಕಳಸ ಹಾಗೂ ಗರ್ಭಗುಡಿಯಲ್ಲಿನ ಮೂರ್ತಿಗಳನ್ನು ಪುನರ್ ಸ್ಥಾಪಿಸಲಾಯಿತು. ದೇವಸ್ಥಾನದ ಒಳಾಂಗಣದಲ್ಲಿ ವಿಷ್ಣುವಿನ ದಶಾವತಾರದ ಮೂರ್ತಿಗಳನ್ನಿಟ್ಟಿರುವುದು ವಿಶೇಷ. ಇದಕ್ಕಾಗಿ ತಮಿಳುನಾಡಿನಿಂದ ಶಿಲ್ಪಿಗಳನ್ನು ಇಲ್ಲಿಗೆ ಕರೆಸಲಾಗಿತ್ತು.</p>.<p>ಸುಮಾರು ನೂರು ವರ್ಷದಷ್ಟು ಹಳೆಯದಾದ ಈ ಮಂದಿರವನ್ನು ಸಿದ್ದರಾಮಯ್ಯ ಅವರ ಕುಟುಂಬದವರು ಗ್ರಾಮಸ್ಥರೊಂದಿಗೆ ಸೇರಿ ಈಚೆಗೆ ಜೀರ್ಣೋದ್ಧಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಬಂದರೆ ಜನರು ಹೆಚ್ಚು ಸೇರಬಹುದು ಎಂಬ ಕಾರಣಕ್ಕೆ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>