ತ್ಯಾಗರಾಜ ರಸ್ತೆ ಹಾಗೂ ರಾಮಾನುಜ ರಸ್ತೆಯ ಆಂಜನೇಯಸ್ವಾಮಿ ದೇಗುಲ, ಅರಮನೆ ಉತ್ತರ ಬಾಗಿಲಿನ ಶ್ರೀರಾಮ ದೇವಸ್ಥಾನ, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನ, ವಿದ್ಯಾರಣ್ಯಪುರಂನ ಚಿನ್ಮಯ ಮಿಷನ್, ಕೃಷ್ಣಮೂರ್ತಿಪುರಂನ ಶ್ರೀರಾಮಂದಿರ, ಜಯಲಕ್ಷ್ಮಿಪುರಂನ ಶ್ರೀರಾಮ ಸೇವಾ ಮಂಡಳಿ ಚಾರಿಟಬಲ್ ಟ್ರಸ್ಟ್, ರಾಮಕೃಷ್ಣನಗರ ‘ಐ’ ಬ್ಲಾಕ್ನ ಗಣಪತಿ ದೇವಸ್ಥಾನ, ಮಾನಂದವಾಡಿ ರಸ್ತೆಯ ಸೀತಾರಾಮ ದೇವಸ್ಥಾನ, ಲಕ್ಷ್ಮಿ ಭಜನಾ ಮಂಡಳಿ, ನಾರಾಯಣಶಾಸ್ತ್ರಿ ರಸ್ತೆಯ ಪ್ರಸನ್ನ ಸೀತಾರಾಮ ಮಂದಿರ ಸೇರಿದಂತೆ ಹಲವೆಡೆ ಅತ್ಯಂತ ಸರಳವಾಗಿ ಪೂಜಾ ಕೈಂಕರ್ಯಗಳು ನಡೆದವು. ಹಲವೆಡೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ತೆರೆದಿದ್ದ ಕೆಲವೇ ದೇಗುಲಗಳಲ್ಲಿ ಸೀಮಿತ ಸಂಖ್ಯೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.