ಹೋಟೆಲ್ ಮಾಲೀಕ ನಾಗರಾಜು ಹಾಗೂ ಅಣ್ಣ ಶಿವರಾಜ್ ನಡುವೆ ಆಸ್ತಿ ವಿವಾದವಿತ್ತು. ಈ ಕುರಿತು ನಾಗರಾಜು ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಪೊಲೀಸರು ಈ ಕುರಿತು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು ಬಹಿಷ್ಕಾರ ಹಾಕಿಲ್ಲವೆಂದು ಲಿಖಿತ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.