15 ಕಲಾವಿದರು ಮತ್ತು ಮೂವರು ತಾಂತ್ರಿಕ ಸಿಬ್ಬಂದಿಯನ್ನು ಒಳಗೊಂಡಿರುವ ಸಂಚಾರಿ ರಂಗ ತಂಡ ಬಳ್ಳಾರಿ, ರಾಯಚೂರು, ಬೀದರ್, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. 45 ದಿನಗಳ ಪ್ರವಾಸದಲ್ಲಿ ಒಟ್ಟು 11 ಕಡೆ ತಲಾ ಮೂರು ನಾಟಕಗಳನ್ನು ಪ್ರದರ್ಶಿಸಲಿದೆ ಎಂದು ರಂಗಾಯಣದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ತಿಳಿಸಿದರು.