ಮೂರು ಗ್ರಾಮಗಳ 244 ಬಿಪಿಎಲ್ ಕುಟುಂಬಗಳಿಗೆ ಈ ಹಿಂದೆ, ಬೆಟ್ಟದತುಂಗ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ನೀಡಲಾಗುತ್ತಿತ್ತು. ಆದರೆ, ಈ ಗ್ರಾಮಕ್ಕೆ 4 ಕಿ.ಮೀ. ಸಂಚರಿಸಬೇಕಿತ್ತು. ಹೀಗಾಗಿ, ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ನೂತನ ನ್ಯಾಯಬೆಲೆ ಅಂಗಡಿ ತೆರೆಯುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದರು. ದೊಡ್ಡೇಗೌಡನ ಕೊಪ್ಪಲು ಗ್ರಾಮದಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಸ್ಥಾಪಿಸಿ ಪಡಿತರ ವಿತರಿಸಲಾಗಿತ್ತು. ಆದರೆ, ಈ ತಿಂಗಳ ಪಡಿತರವನ್ನು ದೊಡ್ಡೇಗೌಡನ ಕೊಪ್ಪಲು ಬದಲಿಗೆ ಬೆಟ್ಟದತುಂಗ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಪೂರೈಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.