ಮೈಸೂರು: ತಲಕಾಡಿನ ಪಂಚಲಿಂಗಗಳಲ್ಲಿ ಒಂದಾಗಿರುವ ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.
ದೇಗುಲ ಶಿಥಿಲಗೊಂಡಿರುವುದರಿಂದ ₹ 30 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತಿದೆ.
ಮೂಲ ದೇವರ ವಿಗ್ರಹಗಳನ್ನು ಹಾಗೇ ಉಳಿಸಿಕೊಂಡು ದೇಗುಲವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗುತ್ತಿದೆ.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡಿದ್ದರು.