ಆಗಸ್ಟ್ನಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಅವರು ಹಲವು ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿ ಒಪ್ಪಂದದ ಸಾಧಕ, ಬಾಧಕಗಳನ್ನು ಚರ್ಚಿಸಿದರು. ಬಹುತೇಕ ಉದ್ಯಮಿಗಳು ಈ ಯೋಜನೆಯಿಂದ ತಮಗೆ ನಷ್ಟವಾಗಲಿದೆ ಎಂದು ಭೀತಿ ವ್ಯಕ್ತಪಡಿಸಿದರು. ಪರಿಸ್ಥಿತಿ ಹೀಗಿದ್ದರೂ, ಒಪ್ಪಂದಕ್ಕೆ ಸಹಿ ಹಾಕುವುದು ಬೇಡ ಎಂದು ಅವರು ಆಗ್ರಹಿಸಿದರು.