ಮೈಸೂರು: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೇಜೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಹಲವು ದಿನಗಳಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದು.
ಎಲ್ಲ ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು ಇದ್ದಾರೆ. ಒಂದು ವೇಳೆ ಅವರನ್ನು ಕಾಯಂಗೊಳಿಸದೇ ಹೋದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.