ಮೈಸೂರು: ಬೆಂಗಳೂರಿನಲ್ಲಿ ಕೋವಿಡ್–19 ನಿಯಂತ್ರಿಸಲಿಕ್ಕಾಗಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ರಾಜ್ಯ ಸರ್ಕಾರ ರಾಜಧಾನಿಗೆ ನಿಯೋಜಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪರವಾಗಿ ಕುರುಬೂರು ಶಾಂತಕುಮಾರ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.