ಗ್ರಾಮದ ಸಿಡಿ ಮಾರಮ್ಮ, ಗಣೇಶ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮುಸ್ಲಿಂ ಸಮುದಾಯದವರ ಈದ್ಗಾ ಮೈದಾನದ ವಿವಾದ ನ್ಯಾಯಾಲಯ ದಲ್ಲಿದ್ದು, ಈ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯದಂತೆ ತಡೆಯಾಜ್ಞೆ ಜಾರಿಯಲ್ಲಿದೆ. ಸ್ಥಳೀಯರು ನ್ಯಾಯಾಲಯದ ಆದೇಶವನ್ನು ಗಣನೆಗೆ ತೆಗೆದುಕೊಳ್ಳದೆ ಭಾನುವಾರ ಭೋಜನ ಕೂಟ ಹಮ್ಮಿಕೊಂಡಿದ್ದರು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಸ್ಥಳೀಯರಲ್ಲಿ ಮನವಿ ಮಾಡಿದರು.