<p><strong>ಮೈಸೂರು: </strong>ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಶುಶ್ರೂಷಕರಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಚಂದ್ರೋದಯ ಐ ಜನರಲ್ ಆಸ್ಪತ್ರೆ (ಸಿ.ಇ.ಜಿ.)ಯ ಶುಶ್ರೂಷಕರಾದ ಡೇವಿಡ್ ಇನೋಸ್ (24), ಅಜಯ್ (22) ಬಂಧಿತರು.</p>.<p>ರೋಗಿಗಳಿಗೆ ನೀಡಬೇಕಿದ್ದ ಚುಚ್ಚುಮದ್ದನ್ನು ಆರೋಪಿಗಳಿಬ್ಬರು ಬುಧವಾರ ರಾತ್ರಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ, ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.</p>.<p>ಬಂಧಿತರಿಂದ ಎರಡು ಚುಚ್ಚುಮದ್ದು ವಶಪಡಿಸಿಕೊಳ್ಳಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.</p>.<p>ಬುಧವಾರ ಸಹ ಐವರು ಶುಶ್ರೂಷಕರನ್ನು ರೆಮ್ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಾಗ ಬಂಧಿಸಲಾಗಿತ್ತು.</p>.<p><strong>ಸಿಂಡಿಕೇಟ್ ಸದಸ್ಯ ಬಂಧನ<br />ಬಳ್ಳಾರಿ: </strong>ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಲಸಿಕೆ ಮಾರಾಟ ಆರೋಪದಡಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಲ್ಲಿಕಾರ್ಜುನ ಗೌಡ ಸೇರಿ ಮೂವರನ್ನು ಕೌಲ್ಬಜಾರ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮಂಜುನಾಥ ಮೆಡಿಕಲ್ ಏಜೆನ್ಸಿ ಮಾಲೀಕ ವೆಂಕಟೇಶ ಬಾಬು, ವರ್ತಕ ಪೋಲಾ ಪ್ರವೀಣ್ ಬಂಧಿತ ಇನ್ನಿಬ್ಬರು.</p>.<p>‘ಈಗ ಮೂವರ ಬಂಧನದ ಬಳಿಕ ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದು, ಇನ್ನಷ್ಟು ಆರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಶುಶ್ರೂಷಕರಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಚಂದ್ರೋದಯ ಐ ಜನರಲ್ ಆಸ್ಪತ್ರೆ (ಸಿ.ಇ.ಜಿ.)ಯ ಶುಶ್ರೂಷಕರಾದ ಡೇವಿಡ್ ಇನೋಸ್ (24), ಅಜಯ್ (22) ಬಂಧಿತರು.</p>.<p>ರೋಗಿಗಳಿಗೆ ನೀಡಬೇಕಿದ್ದ ಚುಚ್ಚುಮದ್ದನ್ನು ಆರೋಪಿಗಳಿಬ್ಬರು ಬುಧವಾರ ರಾತ್ರಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ, ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.</p>.<p>ಬಂಧಿತರಿಂದ ಎರಡು ಚುಚ್ಚುಮದ್ದು ವಶಪಡಿಸಿಕೊಳ್ಳಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.</p>.<p>ಬುಧವಾರ ಸಹ ಐವರು ಶುಶ್ರೂಷಕರನ್ನು ರೆಮ್ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಾಗ ಬಂಧಿಸಲಾಗಿತ್ತು.</p>.<p><strong>ಸಿಂಡಿಕೇಟ್ ಸದಸ್ಯ ಬಂಧನ<br />ಬಳ್ಳಾರಿ: </strong>ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಲಸಿಕೆ ಮಾರಾಟ ಆರೋಪದಡಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಲ್ಲಿಕಾರ್ಜುನ ಗೌಡ ಸೇರಿ ಮೂವರನ್ನು ಕೌಲ್ಬಜಾರ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮಂಜುನಾಥ ಮೆಡಿಕಲ್ ಏಜೆನ್ಸಿ ಮಾಲೀಕ ವೆಂಕಟೇಶ ಬಾಬು, ವರ್ತಕ ಪೋಲಾ ಪ್ರವೀಣ್ ಬಂಧಿತ ಇನ್ನಿಬ್ಬರು.</p>.<p>‘ಈಗ ಮೂವರ ಬಂಧನದ ಬಳಿಕ ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದು, ಇನ್ನಷ್ಟು ಆರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>