<p><strong>ಮೈಸೂರು: </strong>ಕವಿ ಸಿದ್ಧಲಿಂಗಯ್ಯ ಅವರಿಗೆ ಇಲ್ಲಿನ ಜಿಲ್ಲಾ ಸಾಹಿತ್ಯ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.</p>.<p>ಇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ವಿಮರ್ಶಕ ಪ್ರೊ.ಸಿ.ನಾಗಣ್ಣ, ‘ಸಿದ್ಧಲಿಂಗಯ್ಯ ಅವರ ಹೆಚ್ಚಿನ ಕೃತಿಗಳು ಇಂಗ್ಲೀಷ್ಗೆ ಭಾಷಾಂತರ ಆಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಇವರ ಆಯ್ದ ಕವನಗಳನ್ನು ಭಾಷಾಂತರಿಸುವ ಕೆಲಸ ನಡೆಯುತ್ತಿದೆ. ಇದು ಬಿಡುಗಡೆಯಾಗುವ ಮುನ್ನವೇ ಇವರು ನಿಧನರಾದರು ಎಂದು ಹೇಳಿದರು.</p>.<p>ತಮ್ಮ ಕಾವ್ಯಗಳ ಮೂಲಕ ದಲಿತ ಲೋಕದಲ್ಲಿ ಇವರು ಜಾಗೃತಿ ಮೂಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ನಿರ್ಮಿಸಿದ ರಥವನ್ನು ಮುಂದಕ್ಕೆ ತಳ್ಳಿದವರು ಇವರು ಎಂದು ಅವರು ಶ್ಲಾಘಿಸಿದರು.</p>.<p>ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ‘ಸಿದ್ಧಲಿಂಗಯ್ಯ ಅವರು ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ’ ಎಂದು ಹೇಳುವ ಮೂಲಕ ಜನರನ್ನು ಬಡಿದೆಬ್ಬಿಸಿದರು’ ಎಂದು ಹೇಳಿದರು.</p>.<p>ಇವರು ಯಾರನ್ನೂ ನೋಯಿಸುತ್ತಿರಲಿಲ್ಲ. ದಲಿತ ಸಾಹಿತ್ಯದ ಮುಖ್ಯ ಕವಿ ಮಾತ್ರವಲ್ಲ ಸಾಂಸ್ಕೃತಿಕ ಕವಿಯೂ ಹೌದು ಎಂದು ಅವರು ತಿಳಿಸಿದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ‘ಸಿದ್ಧಲಿಂಗಯ್ಯ ಅವರ ಕವಿತೆಗಳು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ದೊಡ್ಡ ಅಸ್ತ್ರಗಳಾಗಿದ್ದವು. ಅವರ ಕವಿತೆಗಳು ಇಂದಿಗೂ ಹೋರಾಟದ ಕಿಚ್ಚನ್ನು ಹೊತ್ತಿಸುತ್ತವೆ’ ಎಂದು ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಸಿ.ವೆಂಕಟೇಶ್, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಮುಖಂಡ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕವಿ ಸಿದ್ಧಲಿಂಗಯ್ಯ ಅವರಿಗೆ ಇಲ್ಲಿನ ಜಿಲ್ಲಾ ಸಾಹಿತ್ಯ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.</p>.<p>ಇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ವಿಮರ್ಶಕ ಪ್ರೊ.ಸಿ.ನಾಗಣ್ಣ, ‘ಸಿದ್ಧಲಿಂಗಯ್ಯ ಅವರ ಹೆಚ್ಚಿನ ಕೃತಿಗಳು ಇಂಗ್ಲೀಷ್ಗೆ ಭಾಷಾಂತರ ಆಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಇವರ ಆಯ್ದ ಕವನಗಳನ್ನು ಭಾಷಾಂತರಿಸುವ ಕೆಲಸ ನಡೆಯುತ್ತಿದೆ. ಇದು ಬಿಡುಗಡೆಯಾಗುವ ಮುನ್ನವೇ ಇವರು ನಿಧನರಾದರು ಎಂದು ಹೇಳಿದರು.</p>.<p>ತಮ್ಮ ಕಾವ್ಯಗಳ ಮೂಲಕ ದಲಿತ ಲೋಕದಲ್ಲಿ ಇವರು ಜಾಗೃತಿ ಮೂಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ನಿರ್ಮಿಸಿದ ರಥವನ್ನು ಮುಂದಕ್ಕೆ ತಳ್ಳಿದವರು ಇವರು ಎಂದು ಅವರು ಶ್ಲಾಘಿಸಿದರು.</p>.<p>ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ‘ಸಿದ್ಧಲಿಂಗಯ್ಯ ಅವರು ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ’ ಎಂದು ಹೇಳುವ ಮೂಲಕ ಜನರನ್ನು ಬಡಿದೆಬ್ಬಿಸಿದರು’ ಎಂದು ಹೇಳಿದರು.</p>.<p>ಇವರು ಯಾರನ್ನೂ ನೋಯಿಸುತ್ತಿರಲಿಲ್ಲ. ದಲಿತ ಸಾಹಿತ್ಯದ ಮುಖ್ಯ ಕವಿ ಮಾತ್ರವಲ್ಲ ಸಾಂಸ್ಕೃತಿಕ ಕವಿಯೂ ಹೌದು ಎಂದು ಅವರು ತಿಳಿಸಿದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ‘ಸಿದ್ಧಲಿಂಗಯ್ಯ ಅವರ ಕವಿತೆಗಳು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ದೊಡ್ಡ ಅಸ್ತ್ರಗಳಾಗಿದ್ದವು. ಅವರ ಕವಿತೆಗಳು ಇಂದಿಗೂ ಹೋರಾಟದ ಕಿಚ್ಚನ್ನು ಹೊತ್ತಿಸುತ್ತವೆ’ ಎಂದು ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಸಿ.ವೆಂಕಟೇಶ್, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಮುಖಂಡ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>