ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಸನ್ನಿಧಿ ನವೀಕರಣ: ತನಿಖೆಗೆ ಸೂಚನೆ

ರೋಹಿಣಿ ಸಿಂಧೂರಿಗೆ ಮತ್ತೊಂದು ತನಿಖೆಯ ಕಂಟಕ
Last Updated 21 ಜೂನ್ 2021, 10:47 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯ ನಿವಾಸ ‘ಜಲಸನ್ನಿಧಿ’ಯಲ್ಲಿ ನಡೆಸಿರುವ ₹ 16.35 ಲಕ್ಷ ವೆಚ್ಚದ ನವೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತರಿಗೆ ಆದೇಶಿಸಿದ್ದಾರೆ.

ಜಿಲ್ಲೆಯ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್‌ ಜೂನ್‌ 5ರಂದು ಈ ಬಗ್ಗೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ಸುದೀರ್ಘವಾದ ಪತ್ರವೊಂದನ್ನು ಬರೆದಿದ್ದರು.

‘ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯಿಲ್ಲದೆ ‘ಜಲಸನ್ನಿಧಿ’ಯಲ್ಲಿ ನವೀಕರಣ ಕಾಮಗಾರಿ ನಡೆಸಿ, ನೆಲಹಾಸಿಗೆ ವಿಟ್ರಿಫೈಡ್‌ ಟೈಲ್ಸ್‌ ಅಳವಡಿಸಿದ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಅಮಾನತುಗೊಳಿಸಬೇಕು’ ಎಂದು ಸಾ.ರಾ.ಮಹೇಶ್‌ ಆ ಪತ್ರದಲ್ಲಿ ಆಗ್ರಹಿಸಿದ್ದರು. ಯಾವ್ಯಾವ ನಿಯಮಾವಳಿ ಉಲ್ಲಂಘನೆಯಾಗಿದ್ದವು ಎಂಬುದನ್ನು ಉಲ್ಲೇಖಿಸಿದ್ದರು.

‌ಶಾಸಕರ ಈ ದೂರಿನ ಅನ್ವಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತನಿಖೆ ನಡೆಸುವಂತೆ ಪ್ರಾದೇಶಿಕ ಆಯುಕ್ತರಿಗೆ ಜೂನ್‌ 18ರಂದು ಆದೇಶಿಸಿದ್ದಾರೆ. ಇದರಿಂದ ರೋಹಿಣಿ ಸಿಂಧೂರಿಗೆ ಮತ್ತೊಂದು ತನಿಖೆಯ ಕಂಟಕ ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT