ಹುಣಸೂರು, ಪಿರಿಯಾಪಟ್ಟಣ ಮತ್ತು ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಒಟ್ಟು 2,500 ಆದಿವಾಸಿಗರು ಅರಣ್ಯ ಹಕ್ಕು ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಹುಣಸೂರು ಉಪವಿಭಾಗಾಧಿಕಾರಿ ಕಚೇರಿಯಲ್ಲೇ ತಡೆ ಹಿಡಿದಿದೆ. ಸರ್ಕಾರಿ ಆದೇಶದನ್ವಯ ಮುಂಚೆಯೇ ಸಲ್ಲಿಸಿದ್ದ ಅರ್ಜಿದಾರರ ಮನವಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಅದರಂತೆ ಆದಿವಾಸಿಗಳಿಗೆ 10 ಎಕರೆ ಕೃಷಿ ಭೂಮಿ ನೀಡಿ, ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್ ಮನವಿ ಮಾಡಿದ್ದಾರೆ.