ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಮೊರೆ

Last Updated 1 ಜುಲೈ 2021, 14:14 IST
ಅಕ್ಷರ ಗಾತ್ರ

ಮೈಸೂರು: ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳು ಗುರುವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೋವಿಡ್ ಹರಡುವುದನ್ನು ತಡೆಯಲು ತಮ್ಮ ಜೀವದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ ಎಂದು ಸಂಘದ ರಾಜ್ಯ ಸಲಹೆಗಾರರಾದ ಪಿ.ಎಸ್.ಸಂಧ್ಯಾ ಆತಂಕ ವ್ಯಕ್ತಪಡಿಸಿದರು.

ಸೋಂಕಿತರ ಗಂಟಲು ದ್ರವ ಸಂಗ್ರಹಿಸುವುದು, ಸೋಂಕಿತರ ಚಲನವಲನಗಳ ಮೇಲೆ ನಿಗಾ ವಹಿಸುವುದು, ಅವರ ಯೋಗಕ್ಷೇಮ ನೋಡಿಕೊಳ್ಳುವ ಕೆಲಸವನ್ನು ಇವರು ಮಾಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಇವರು ಅವಾಚ್ಯ ಶಬ್ದಗಳ ನಿಂದನೆಗೆ ಒಳಗಾಗುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬನ್ನೂರಿನ ಆಶಾ ಕಾರ್ಯಕರ್ತೆ ಲಕ್ಷ್ಮಿ ಮೇಲೆ ಈಚೆಗೆ ಹಲ್ಲೆ ನಡೆದಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆಶಾ ಕಾರ್ಯಕರ್ತೆಯರು ಬದುಕುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಆಶಾ ಕಾರ್ಯಕರ್ತೆಯರ ಭದ್ರತೆಗೆ ವಿಶೇಷ ಗಮನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುಳಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚಿನ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸುವ ವೇಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT