ಮೈಸೂರು: ಕೋಚನಹಳ್ಳಿ ರೈತರ ಹೋರಾಟ ಸಮಿತಿಯ ಸದಸ್ಯರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.
ಕಳೆದ 87 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈಗಲಾದರೂ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.
ಕೈಗಾರಿಕೆಗಳಿಗೆ ಭೂಮಿ ನೀಡಿದ ರೈತರ ಕುಟುಂಬಕ್ಕೆ ಸರ್ಕಾರ ಉದ್ಯೋಗ ನೀಡುವ ಭರವಸೆ ನೀಡಬೇಕು, ಕೈಗಾರಿಕೆ ಸ್ಥಾಪಿಸದೇ ಬಾಕಿ ಉಳಿದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದರು.