<p><strong>ಮೈಸೂರು:</strong> ಕಟ್ಟಡ ಕಾರ್ಮಿಕರಿಗೆ ₹ 10 ಸಾವಿರ ಪರಿಹಾರಧನ ವಿತರಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕಾರ್ಮಿಕ ಕಲ್ಯಾಣ ಮಂಡಳಿಯು ‘ಸೆಸ್’ ರೂಪದಲ್ಲಿ ₹ 10 ಸಾವಿರ ಕೋಟಿಯಷ್ಟು ಹಣ ಸಂಗ್ರಹಿಸಿದೆ. ಈ ಹಣದಲ್ಲಿ ಕಾರ್ಮಿಕರಿಗೆ ಪರಿಹಾರ ಧನ ವಿತರಿಸಬೇಕು. ಈಗ ಘೋಷಿಸಿರುವ ನೆರವು ಸಾಲದು ಎಂದು ಅವರು ಹೇಳಿದರು.</p>.<p>‘ಸೆಸ್’ ಹಣದಲ್ಲಿ ಖರೀದಿಸಿದ ಆಹಾರ ಕಿಟ್ಗಳನ್ನು ಶಾಸಕರ ಮೂಲಕ ವಿತರಿಸುತ್ತಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಕಿಟ್ ಖರೀದಿಯಲ್ಲೇ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.</p>.<p>ಅಸಂಘಟಿತ ವಲಯದಲ್ಲಿ ಕೋಟ್ಯಂತರ ಜನರು ದುಡಿಯುತ್ತಿದ್ದಾರೆ. ಇವರಿಗೆ ನೆಪಮಾತ್ರಕ್ಕೆ ಎಂಬಂತೆ ಒಂದಿಷ್ಟು ಪರಿಹಾರ ಘೋಷಿಸಲಾಗಿದೆ. ಇದರ ಜತೆಗೆ, ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗಳಿಸಿ ಹೆಚ್ಚಿನ ಹಣ ನೀಡಬೇಕು ಎಂದರು.</p>.<p>ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಕಾರರು ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ಮುಖಂಡರಾದ ಬಾಲಾಜಿರಾವ್, ಜಗನ್ನಾಥ್, ಜಿ.ಜಯರಾಮು, ಬಸವಯ್ಯ, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಟ್ಟಡ ಕಾರ್ಮಿಕರಿಗೆ ₹ 10 ಸಾವಿರ ಪರಿಹಾರಧನ ವಿತರಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕಾರ್ಮಿಕ ಕಲ್ಯಾಣ ಮಂಡಳಿಯು ‘ಸೆಸ್’ ರೂಪದಲ್ಲಿ ₹ 10 ಸಾವಿರ ಕೋಟಿಯಷ್ಟು ಹಣ ಸಂಗ್ರಹಿಸಿದೆ. ಈ ಹಣದಲ್ಲಿ ಕಾರ್ಮಿಕರಿಗೆ ಪರಿಹಾರ ಧನ ವಿತರಿಸಬೇಕು. ಈಗ ಘೋಷಿಸಿರುವ ನೆರವು ಸಾಲದು ಎಂದು ಅವರು ಹೇಳಿದರು.</p>.<p>‘ಸೆಸ್’ ಹಣದಲ್ಲಿ ಖರೀದಿಸಿದ ಆಹಾರ ಕಿಟ್ಗಳನ್ನು ಶಾಸಕರ ಮೂಲಕ ವಿತರಿಸುತ್ತಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಕಿಟ್ ಖರೀದಿಯಲ್ಲೇ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.</p>.<p>ಅಸಂಘಟಿತ ವಲಯದಲ್ಲಿ ಕೋಟ್ಯಂತರ ಜನರು ದುಡಿಯುತ್ತಿದ್ದಾರೆ. ಇವರಿಗೆ ನೆಪಮಾತ್ರಕ್ಕೆ ಎಂಬಂತೆ ಒಂದಿಷ್ಟು ಪರಿಹಾರ ಘೋಷಿಸಲಾಗಿದೆ. ಇದರ ಜತೆಗೆ, ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗಳಿಸಿ ಹೆಚ್ಚಿನ ಹಣ ನೀಡಬೇಕು ಎಂದರು.</p>.<p>ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಕಾರರು ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ಮುಖಂಡರಾದ ಬಾಲಾಜಿರಾವ್, ಜಗನ್ನಾಥ್, ಜಿ.ಜಯರಾಮು, ಬಸವಯ್ಯ, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>